ಕನಕಪುರ(ರಾಮನಗರ ಜಿಲ್ಲೆ): ಮದುವೆಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಸಮೀಪ ನಡೆದಿದೆ.
ಗಾಯಾಳುಗಳನ್ನು ಕನಕಪುರದ ಐಪಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಗಡೇಗೌಡನದೊಡ್ಡಿ ಗ್ರಾಮದ ಗಂಡು ಮತ್ತು ಹೆಣ್ಣಿನ ಮದುವೆಯನ್ನು ಮಡಿವಾಳದಲ್ಲಿ ಆಯೋಜಿಸಲಾಗಿತ್ತು. ಹೀಗಾಗಿ, ಬೆಳಿಗ್ಗೆಯ ಎರಡು ಖಾಸಗಿ ಬಸ್ಗಳಲ್ಲಿ ಗ್ರಾಮದ ಜನರು ಮದುವೆಗೆ ಹೊರಟಿದ್ದರು.
ಒಂದು ಬಸ್ ಸಂಗಮ ಸಮೀಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದರು.
ಗಾಯಳು ಆರೋಗ್ಯ ವಿಚಾರಿಸಿ ಮಾಜಿ ಸಂಸದ ಡಿಕೆ ಸುರೇಶ್
ಗಾಯಾಳುಗಳನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಂಸದ ಡಿಕೆ ಸುರೇಶ್ , ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ಮದುವೆಯ ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲಿ ಈ ರೀತಿಯ ಆಘಾತವುಂಟಾಗಿರುವುದು ದುಃಖದ ವಿಚಾರ. ಆದಷ್ಟು ಬೇಗ ಎಲ್ಲರೂ ಗುಣಮುಖರಾಗಲಿ ಎಂದು ಹಾರೈಸಿ, ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…