ರಾಜ್ಯ

ಜಡ್ಜ್‌ ಮುಂದೆ ದರ್ಶನ್‌ ಹೇಳಿದ್ದೇನು? ದಾಸನ ವಿಚಾರಣೆ ಹೇಗಿತ್ತು ಗೊತ್ತಾ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತೊಮ್ಮೆ ಜೈಲು ಪಾಲಾಗಿದ್ದಾರೆ.  13 ವರ್ಷದ ಬಳಿಕ ಸಾರಥಿ ಮತ್ತೆ ಜೈಲುವಾಸಿಯಾಗಿದ್ದಾರೆ.

ದರ್ಶನ್‌ ಸೇರಿದಂತೆ ಸಹಚರರ ಪೊಲೀಸ್‌ ಕಸ್ಟಡಿ ಇಂದು(ಜೂ.22) ಮುಗಿದ ಹಿನ್ನಲೆ ಕೋರ್ಟ್‌ ಮುಂದೆ ಹಾಜರು ಪಡಿಸಿದ್ದರು. ತನಿಖಾಧಿಕಾರಿ ಚಂದನ್‌ ಅವರು ಆರೋಪಿಗಳಾದ ದರ್ಶನ್‌, ವಿನಯ್‌, ದರ್ಶನ್‌ ಮತ್ತು ಪ್ರದೂಶ್‌ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರ ಎಸ್‌ಪಿಪಿ ಪ್ರಸನ್ನ ಕುಮಾರ್‌ ಮತ್ತವರ ತಂಡ ಹಾಗೂ ದರ್ಶನ್‌ ವಕೀಲರ ತಂಡ ಹಾಜರಿತ್ತು. ಈ ವೇಳೆ ವಾದ-ವಿವಾದ ನಡೆಯಿತು.

ಜಡ್ಜ್:‌ ನಿಮಗೆ ಕಸ್ಟಡಿಯಲ್ಲಿ ಏನಾದ್ರೂ ತೊಂದರೆ ಆಯ್ತಾ
ದರ್ಶನ್:‌ ಇಲ್ಲ ಸ್ವಾಮಿ ಯಾವುದೇ ತೊಂದರೆ ಆಗಿಲ್ಲ

ಜಡ್ಜ್:‌ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ರಾ. ನಿಮಗೆ ಏನಾದ್ರೂ ಮೆಡಿಕಲ್‌ ಪರೀಕ್ಷೆ ಅವಶ್ಯಕತೆ ಇದೆಯಾ?
ದರ್ಶನ್:‌ ಹೌದು ಸ್ವಾಮಿ, ನನಗೆ ಇಂದು ಬೆಳಿಗ್ಗೆ ಠಾಣೆಯಲ್ಲಿ ಮಾಡಿಸಿದ್ರು. ಬೇರೆ ಪರೀಕ್ಷೆ ಅವಶ್ಯಕತೆ ಇಲ್ಲ.

ಈ ವೇಳೆ ಸರ್ಕಾರ ಪರ ಎಸ್‌ಪಿಪಿ ಪ್ರಸನ್ನ ಕುಮಾರ್‌, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು.

ಆರೋಪಿಗಳು ರೇಣುಕಾಸ್ವಾಮಿಯನ್ನು ತೀರ ಅಮಾನುಷವಾಗಿ ಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಗೌರವವಿಲ್ಲ. ಆರೋಪಿ ಎ1 ಪ್ರಜೋದನೆ ಮೇರೆಗೆ ದರ್ಶನ್‌ ಮತ್ತು ತಂಡ ಈ ಕೃತ್ಯ ಮಾಡಿದೆ. ಒಳಸಂಚು ರೂಪಿಸಿ ಅಪಹರಣ ಹಾಗೂ ಹತ್ಯೆ ಮಾಡಿ ಕಾನೂನು ದುರುಪಯೋಗ ಪಡಿಸಿಕೊಂಡಿದ್ದಾರೆ. ಅಷ್ಟೆ ಅಲ್ಲದೇ ಸಾಕ್ಷ್ಯ ನಾಶಕ್ಕಾಗಿ ಹಣ ಬಳಕೆ ಮಾಡಿದ್ದಾರೆ. ಇದೆಲ್ಲವೂ ಸಹ ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿಗೆ ಅಭಿಮಾನಿ ಬಳಗವಿದ್ದು, ಬೆದರಿಕೆ ಬರ್ತಾ ಇದೆ. ಹೀಗಾಗಿ ದರ್ಶನ್‌ ಮತ್ತು ತಂಡವನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂಬ ಎಸ್‌ಪಿಪಿ ಪ್ರಸನ್ನ ಕುಮಾರ್‌ ಮನವಿ ಮೇರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

12 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

13 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

13 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

14 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

14 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

18 hours ago