ರಾಜ್ಯ

ನವೆಂಬರ್‌ ಕ್ರಾಂತಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ. ಹೈಕಮಾಂಡ್‌ ಬಯಸಿದ್ದಷ್ಟು ದಿನವೂ ಮುಖ್ಯಮಂತ್ರಿ ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ.

ದೆಹಲಿಗೆ ಭೇಟಿ ನೀಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ 21ಕ್ಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಗಡುವು ನೀಡಲಾಗಿದೆ. ಕರ್ನಾಟಕದಲ್ಲಿ ನವೆಂಬರ್‌ ತಿಂಗಳಿನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂಬೆಲ್ಲಾ ವದಂತಿಗಳಿಗೆ ಸಾರಾಸಗಟಾಗಿ ತೆರೆ ಎಳೆದಿದ್ದಾರೆ.

ಕ್ರಾಂತಿಯಾಗುವುದು ನಿಜ. ಆದರೆ ಅದು 2028ಕ್ಕೆ ಮಾತ್ರ. ಕಾಂಗ್ರೆಸ್‌‍ ಪಕ್ಷ ಕರ್ನಾಟಕದಲ್ಲಿ ಮತ್ತೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ. ಆ ಕ್ರಾಂತಿ ಹೊರತು ಪಡಿಸಿದರೆ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್‌ರಚನೆ ಸೇರಿದಂತೆ ಇನ್ಯಾವುದೇ ಕ್ರಾಂತಿಯಾಗುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ ವೇಳೆಯಲ್ಲೇ ಹೇಳಿಕೆ ನೀಡಿ, ಮುಂದಿನ 5 ವರ್ಷವೂ ತಾವೇ ಮುಖ್ಯಮಂತ್ರಿಯಾಗಿರುವುದಾಗಿ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದರು. ಈಗ ಡಿ.ಕೆ.ಶಿವಕುಮಾರ್‌ ಅದೇ ದೆಹಲಿಯ ಭೇಟಿಯ ವೇಳೆ ಹೇಳಿಕೆ ನೀಡಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಹಾಡುವ ಪ್ರಯತ್ನ ಮಾಡಿದ್ದಾರೆ.

ಇದನ್ನು ಓದಿ: 2028ಕ್ಕೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗುತ್ತೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ದೆಹಲಿಯಲ್ಲಿ ತಾವು ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ವರಿಷ್ಠ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಬಹುದು. ಅದನ್ನು ಹೊರತು ಪಡಿಸಿದರೆ, ನಾಯಕತ್ವ ಬದಲಾವಣೆಯಾಗಲಿ, ಅಧಿಕಾರ ಹಂಚಿಕೆಯಾಗಲಿ, ಸಚಿವ ಸಂಪುಟ ಪುನರ್‌ ರಚನೆಗೆ ಸಂಬಂಧಿಸಿದ್ದಂತಾಗಲಿ ಮಾತನಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಸಂಪುಟ ಪುನರ್‌ರಚನೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ನನ್ನ ಬಳಿಯಂತೂ ಯಾವುದೇ ವಿಚಾರಗಳು ಪ್ರಸ್ತಾಪವಾಗಿಲ್ಲ. ನಾಯಕತ್ವ ಬದಲಾವಣೆ ಕುರಿತು ಪಕ್ಷ ಹೇಳಿದಂತೆ ಕೇಳುತ್ತೇವೆ ಎಂದು ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ಸ್ಪಷ್ಟಪಡಿಸಿದ್ದೇವೆ. ಯಾವತ್ತಾದರೂ ನಾನು ಬೇರೆ ರೀತಿಯಲ್ಲಿ ಮಾತನಾಡಿದ್ದೇನೆಯೇ? ಎಂದು ಪ್ರಶ್ನಿಸಿದರು.

5 ವರ್ಷ ಮುಖ್ಯಮಂತ್ರಿ ಇರಬೇಕೆಂದು ಹೈಕಮಾಂಡ್‌ ಹೇಳಿದರೆ ಹಾಗೆಯೇ ಪಾಲಿಸುತ್ತೇವೆ. 10 ವರ್ಷ, 15 ವರ್ಷ ಮುಖ್ಯಮಂತ್ರಿಯೇ ಮುಂದುವರಿಬೇಕೆಂದರೆ ನಾವು ಒಪ್ಪಿಕೊಳ್ಳುತ್ತೇವೆ. ನಾನಂತೂ ಪಕ್ಷದ ಶಿಸ್ತಿನ ಶಿಪಾಯಿ. ಗಡಿಯನ್ನು ದಾಟಿ ಹೋಗುವುದಿಲ್ಲ. ನಮಗೆ ಹೇಳಿರುವ ಕೆಲಸವನ್ನು ಚಾಚು ತಪ್ಪದೆ ಮಾಡುತ್ತೇವೆ ಎಂದು ಹೇಳಿದರು.

ನವೆಂಬರ್‌, ಡಿಸೆಂಬರ್‌, ಜನವರಿ, ಫೆಬ್ರವರಿ ಯಾವ ಕ್ರಾಂತಿಗಳು ಆಗುವುದಿಲ್ಲ. ಕ್ರಾಂತಿಯಂತೂ ಆಗುತ್ತದೆ. 2028ಕ್ಕೆ ಕಾಂಗ್ರೆಸ್‌‍ ಸರ್ಕಾರ ಮರಳಿ ಅಧಿಕಾರಕ್ಕೆ ಬರುತ್ತದೆ. ನವೆಂಬರ್‌ ತಿಂಗಳಿನಲ್ಲಿ 22, 26 ಎಂದು ದಿನಾಂಕಗಳನ್ನು ಅನಗತ್ಯವಾಗಿ ಬರೆಯಲಾಗುತ್ತಿದೆ. ಅಂತಹ ಸುದ್ದಿಗಳು ಆಧಾರ ರಹಿತ ಎಂದರು.

ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟ ಪುನರ್‌ರಚನೆಯಾಗುತ್ತದೆ ಎಂದು ಕಾಯುತ್ತಿರುವ ಆಕಾಂಕ್ಷಿಗಳಿ ನಿರಾಶೆಯಾಗುವಂತೆ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅದ್ಯಾವುದೂ ನಡೆಯುವುದಿಲ್ಲ. ಹೈಕಮಾಂಡ್‌ಗೆ ಯಾವಾಗ ಏನೂ ಮಾಡಬೇಕೆಂದು ಗೊತ್ತಿದೆ ಎಂದಿದ್ದಾರೆ. ಈ ಮೂಲಕ ಇತ್ತೀಚಿನ ದಿನಗಳಲ್ಲಿ ಭಾರೀ ಸದ್ದು ಮಾಡಿದ ನವೆಂಬರ್‌ ಕ್ರಾಂತಿಯ ಬಗ್ಗೆ ಡಿ.ಕೆ.ಶಿವಕುಮಾರ್‌ ತೆರೆ ಎಳೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

2 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

2 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

3 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

3 hours ago