ರಾಜ್ಯ

ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.

ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ ಅವರು ನೇರ ಉತ್ತರ ನೀಡದೆ ತಾವು 30 ವರ್ಷಗಳ ಹಿಂದೆ ಹೊಂದಿದ್ದ ಅದೇ ಅಭಿಪ್ರಾಯ ಈಗಲೂ ಹೊಂದಿರುವುದಾಗಿ ಹೇಳಿದರು.

ಡಿಸೆಂಬರ್‌ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದ ತಮ್ಮ ಹೇಳಿಕೆಯನ್ನು ಕಮಲ್‌ ಹಾಸನ್‌ ಉಲ್ಲೇಖಿಸುತ್ತಿದ್ದರು. ಆ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್‌ ಒಬ್ಬರಾಗಿದ್ದರು.

“ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು,” ಎಂದು ಅವರು ಆಗ ಹೇಳಿದ್ದರು.

ಬಿಜೆಪಿಯ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು 2020ರಲ್ಲಿ ಸುಪ್ರೀಂ ಕೋರ್ಟ್‌ ಖುಲಾಸೆಗೊಳಿಸಿದಾಗ ಕಮಲ್‌ ಹಾಸನ್‌ ಮಾಡಿದ್ದ ಟ್ವೀಟ್‌ ಕೂಡ ಗಮನ ಸೆಳೆದಿತ್ತು.

“ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಪ್ರಯೋಜಕವಾಗಬಾರದು,” ಎಂದು ಕಮಲ್‌ ಹಾಸನ್‌ ಆಗ ಟ್ವೀಟ್‌ ಮಾಡಿದ್ದರು.

ಮಹಾತ್ಮ ಗಾಂಧೀಜಿ ಅವರ ಹತ್ಯೆಯನ್ನಾಧರಿತ ಹೇ ರಾಮ್‌ ಸಹಿತ ತಮ್ಮ ಸಿನಿಮಗಾಗಳಲ್ಲೂ ಬಲಪಂಥೀಯ ತೀವ್ರವಾದದ ಟೀಕಾಕಾರರಾಗಿದ್ದಾರೆ ಕಮಲ್‌ ಹಾಸನ್. ಆದರೆ ಅವರ ಸಿನಿಮಾ ವಿಶ್ವರೂಪಂ ಮುಸ್ಲಿಮರನ್ನು ಬಿಂಬಿಸಿದ ರೀತಿಗಾಗಿ ಆ ಸಮುದಾಯದಿಂದ ಟೀಕೆಗೊಳಗಾಗಿತ್ತು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago