ರಾಜ್ಯ

ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.

ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ ಅವರು ನೇರ ಉತ್ತರ ನೀಡದೆ ತಾವು 30 ವರ್ಷಗಳ ಹಿಂದೆ ಹೊಂದಿದ್ದ ಅದೇ ಅಭಿಪ್ರಾಯ ಈಗಲೂ ಹೊಂದಿರುವುದಾಗಿ ಹೇಳಿದರು.

ಡಿಸೆಂಬರ್‌ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದ ತಮ್ಮ ಹೇಳಿಕೆಯನ್ನು ಕಮಲ್‌ ಹಾಸನ್‌ ಉಲ್ಲೇಖಿಸುತ್ತಿದ್ದರು. ಆ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್‌ ಒಬ್ಬರಾಗಿದ್ದರು.

“ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು,” ಎಂದು ಅವರು ಆಗ ಹೇಳಿದ್ದರು.

ಬಿಜೆಪಿಯ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು 2020ರಲ್ಲಿ ಸುಪ್ರೀಂ ಕೋರ್ಟ್‌ ಖುಲಾಸೆಗೊಳಿಸಿದಾಗ ಕಮಲ್‌ ಹಾಸನ್‌ ಮಾಡಿದ್ದ ಟ್ವೀಟ್‌ ಕೂಡ ಗಮನ ಸೆಳೆದಿತ್ತು.

“ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಪ್ರಯೋಜಕವಾಗಬಾರದು,” ಎಂದು ಕಮಲ್‌ ಹಾಸನ್‌ ಆಗ ಟ್ವೀಟ್‌ ಮಾಡಿದ್ದರು.

ಮಹಾತ್ಮ ಗಾಂಧೀಜಿ ಅವರ ಹತ್ಯೆಯನ್ನಾಧರಿತ ಹೇ ರಾಮ್‌ ಸಹಿತ ತಮ್ಮ ಸಿನಿಮಗಾಗಳಲ್ಲೂ ಬಲಪಂಥೀಯ ತೀವ್ರವಾದದ ಟೀಕಾಕಾರರಾಗಿದ್ದಾರೆ ಕಮಲ್‌ ಹಾಸನ್. ಆದರೆ ಅವರ ಸಿನಿಮಾ ವಿಶ್ವರೂಪಂ ಮುಸ್ಲಿಮರನ್ನು ಬಿಂಬಿಸಿದ ರೀತಿಗಾಗಿ ಆ ಸಮುದಾಯದಿಂದ ಟೀಕೆಗೊಳಗಾಗಿತ್ತು.

andolanait

Recent Posts

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

22 mins ago

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…

38 mins ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

5 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

5 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

22 hours ago