ರಾಜ್ಯ

ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.

ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ ಅವರು ನೇರ ಉತ್ತರ ನೀಡದೆ ತಾವು 30 ವರ್ಷಗಳ ಹಿಂದೆ ಹೊಂದಿದ್ದ ಅದೇ ಅಭಿಪ್ರಾಯ ಈಗಲೂ ಹೊಂದಿರುವುದಾಗಿ ಹೇಳಿದರು.

ಡಿಸೆಂಬರ್‌ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದ ತಮ್ಮ ಹೇಳಿಕೆಯನ್ನು ಕಮಲ್‌ ಹಾಸನ್‌ ಉಲ್ಲೇಖಿಸುತ್ತಿದ್ದರು. ಆ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್‌ ಒಬ್ಬರಾಗಿದ್ದರು.

“ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು,” ಎಂದು ಅವರು ಆಗ ಹೇಳಿದ್ದರು.

ಬಿಜೆಪಿಯ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು 2020ರಲ್ಲಿ ಸುಪ್ರೀಂ ಕೋರ್ಟ್‌ ಖುಲಾಸೆಗೊಳಿಸಿದಾಗ ಕಮಲ್‌ ಹಾಸನ್‌ ಮಾಡಿದ್ದ ಟ್ವೀಟ್‌ ಕೂಡ ಗಮನ ಸೆಳೆದಿತ್ತು.

“ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಪ್ರಯೋಜಕವಾಗಬಾರದು,” ಎಂದು ಕಮಲ್‌ ಹಾಸನ್‌ ಆಗ ಟ್ವೀಟ್‌ ಮಾಡಿದ್ದರು.

ಮಹಾತ್ಮ ಗಾಂಧೀಜಿ ಅವರ ಹತ್ಯೆಯನ್ನಾಧರಿತ ಹೇ ರಾಮ್‌ ಸಹಿತ ತಮ್ಮ ಸಿನಿಮಗಾಗಳಲ್ಲೂ ಬಲಪಂಥೀಯ ತೀವ್ರವಾದದ ಟೀಕಾಕಾರರಾಗಿದ್ದಾರೆ ಕಮಲ್‌ ಹಾಸನ್. ಆದರೆ ಅವರ ಸಿನಿಮಾ ವಿಶ್ವರೂಪಂ ಮುಸ್ಲಿಮರನ್ನು ಬಿಂಬಿಸಿದ ರೀತಿಗಾಗಿ ಆ ಸಮುದಾಯದಿಂದ ಟೀಕೆಗೊಳಗಾಗಿತ್ತು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

1 hour ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

4 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

8 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

13 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

13 hours ago