ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್‌ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ ಪತ್ನಿ ಹಾಗೂ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಮಾಧ್ಯಮದಲ್ಲಿ ತೋರಿಸುತ್ತಿರುವುದನ್ನು ನೋಡಿ ಎಲ್ಲ ಮಾಹಿತಿ ತಿಳಿದುಕೊಂಡಿದ್ದೇನೆ. ಸತ್ಯ ಹೊರ ಬರಬೇಕು ಅಂತ ಪೊಲೀಸ್‌ ಹಾಗೂ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಅವರ ಪರ, ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತಹ ಕೆಲಸ ಆಗಲಿ ಎಂದು ಹೇಳಿದ್ದಾರೆ.

ಯಾರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಸಿಗಲಿ. ಹುಟ್ಟುವ ಮಗು ಹಾಗೂ ಕುಟುಂಬಕ್ಕೆ ನ್ಯಾಯ ಸೀಗಬೇಕಿದೆ. ಚಿತ್ರರಂಗದ ಸಂಪೂರ್ಣ ವಾತಾವರಣ ಸದ್ಯ ಸರಿಯಾಗಿಲ್ಲ. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಚಿತ್ರರಂಗದ ಮೇಲೆ ಕಪ್ಪುಚುಕ್ಕೆ ಬರೋದು ನಮಗೆ ಇಷ್ಟವಿಲ್ಲ. ಈ ಚಿತ್ರರಂಗವನ್ನು ಎಷ್ಟೋ ಜನರು ಕಟ್ಟಿ ಬೆಳಸಿದ್ದಾರೆ. ಅದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಇಡೀ ಚಿತ್ರರಂಗಕ್ಕೆ ನ್ಯಾಯ ಸಿಗಬೇಕಾಗಿದೆ ಎಂದರು.

ಯಾರನ್ನು ಬ್ಯಾನ್‌ ಮಾಡುವ ವಿಚಾರ ಇಲ್ಲ, ಆ ಸಂಸ್ಕೃತಿ ನಮ್ಮಲ್ಲಿಲ್ಲ. ನಮಗೆ ಬ್ಯಾನ್‌ ಮುಖ್ಯವಲ್ಲ, ನ್ಯಾಯ ಮುಖ್ಯ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

5 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

5 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

5 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

5 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

5 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

5 hours ago