ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ ಪತ್ನಿ ಹಾಗೂ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಮಾಧ್ಯಮದಲ್ಲಿ ತೋರಿಸುತ್ತಿರುವುದನ್ನು ನೋಡಿ ಎಲ್ಲ ಮಾಹಿತಿ ತಿಳಿದುಕೊಂಡಿದ್ದೇನೆ. ಸತ್ಯ ಹೊರ ಬರಬೇಕು ಅಂತ ಪೊಲೀಸ್ ಹಾಗೂ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಅವರ ಪರ, ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತಹ ಕೆಲಸ ಆಗಲಿ ಎಂದು ಹೇಳಿದ್ದಾರೆ.
ಯಾರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಸಿಗಲಿ. ಹುಟ್ಟುವ ಮಗು ಹಾಗೂ ಕುಟುಂಬಕ್ಕೆ ನ್ಯಾಯ ಸೀಗಬೇಕಿದೆ. ಚಿತ್ರರಂಗದ ಸಂಪೂರ್ಣ ವಾತಾವರಣ ಸದ್ಯ ಸರಿಯಾಗಿಲ್ಲ. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಚಿತ್ರರಂಗದ ಮೇಲೆ ಕಪ್ಪುಚುಕ್ಕೆ ಬರೋದು ನಮಗೆ ಇಷ್ಟವಿಲ್ಲ. ಈ ಚಿತ್ರರಂಗವನ್ನು ಎಷ್ಟೋ ಜನರು ಕಟ್ಟಿ ಬೆಳಸಿದ್ದಾರೆ. ಅದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಇಡೀ ಚಿತ್ರರಂಗಕ್ಕೆ ನ್ಯಾಯ ಸಿಗಬೇಕಾಗಿದೆ ಎಂದರು.
ಯಾರನ್ನು ಬ್ಯಾನ್ ಮಾಡುವ ವಿಚಾರ ಇಲ್ಲ, ಆ ಸಂಸ್ಕೃತಿ ನಮ್ಮಲ್ಲಿಲ್ಲ. ನಮಗೆ ಬ್ಯಾನ್ ಮುಖ್ಯವಲ್ಲ, ನ್ಯಾಯ ಮುಖ್ಯ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…