ಮೈಸೂರು: ತನ್ನ ಅಭಿಮಾನಿಯನ್ನೇ ಕೊಲೆ ಮಾಡಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಬಂಧನವಾಗಿ ಮೂರು ದಿನವಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂ.14) ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ ಕೇಸ್ ಬಗ್ಗೆ ಪ್ರಭಾವಿಗಳೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಕೇವಲ ಸುದ್ದಿ, ದರ್ಶನ್ ಕೇಸ್ ಬಗ್ಗೆ ಮಾತುಕತೆಗೆ ಯಾವ ಪ್ರಭಾವಿಗಳು ನನ್ನನ್ನು ಭೇಟಿ ಮಾಡಿಲ್ಲ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ, ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುಗ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪೊಲೀಸ್ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಇದರಿಂದ ಯಾರಿಗೂ ಸಮಸ್ಯೆಯಾಗಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…