ರಾಜ್ಯ

ಪ್ರತಾಪ್‌ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್‌ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್‌ ಸಿಂಹ ಸುದ್ದಿಯಲ್ಲಿರುವ ಸಲುವಾಗಿ ಮೈಸೂರಿನ ಪತ್ರಕರ್ತರ ಕೈ ಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತೆಗೆದುಕೊಳ್ಳಿ ಎಂದು ಅಂಗಲಾಚುತ್ತಿದ್ದಾರೆ.

ಇದನ್ನು ಓದಿ: ಸಚಿವ ಪ್ರಿಯಾಂಕ್‌ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ

ಎಲ್ಲಾ ವಿಷಯಗಳಿಗೂ ಬಾಯಿ ಹಾಕುವ ಪ್ರತಾಪ್‌ ಸಿಂಹ ಅವರು ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್‌ ಸಿಂಹರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.

ಪ್ರತಾಪ್‌ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು. ಪ್ರತಾಪ್‌ ಸಿಂಹ ಅವರೇ ನರೇಂದ್ರ ಮೋದಿಯವರು ವಿದ್ಯಾರ್ಹತೆ ಏನು? ಸರ್ಟಿಫಿಕೇಟ್‌ ಎಲ್ಲಿ? ಪೇಪರ್‌ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕಥೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

1 hour ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago