ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರುವ ಸಲುವಾಗಿ ಮೈಸೂರಿನ ಪತ್ರಕರ್ತರ ಕೈ ಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತೆಗೆದುಕೊಳ್ಳಿ ಎಂದು ಅಂಗಲಾಚುತ್ತಿದ್ದಾರೆ.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ
ಎಲ್ಲಾ ವಿಷಯಗಳಿಗೂ ಬಾಯಿ ಹಾಕುವ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಯಾವ ಪೊಸಿಷನ್ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.
ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು. ಪ್ರತಾಪ್ ಸಿಂಹ ಅವರೇ ನರೇಂದ್ರ ಮೋದಿಯವರು ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ? ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕಥೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…