ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರುವ ಸಲುವಾಗಿ ಮೈಸೂರಿನ ಪತ್ರಕರ್ತರ ಕೈ ಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತೆಗೆದುಕೊಳ್ಳಿ ಎಂದು ಅಂಗಲಾಚುತ್ತಿದ್ದಾರೆ.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ
ಎಲ್ಲಾ ವಿಷಯಗಳಿಗೂ ಬಾಯಿ ಹಾಕುವ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಯಾವ ಪೊಸಿಷನ್ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.
ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು. ಪ್ರತಾಪ್ ಸಿಂಹ ಅವರೇ ನರೇಂದ್ರ ಮೋದಿಯವರು ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ? ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕಥೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…