ರಾಜ್ಯ

ಹಠಾತ್‌ ಹೃದಯಾಘಾತ ಸಂಭವಿಸಲು ಇವುಗಳೇ ಪ್ರಮುಖ ಕಾರಣ: ತಜ್ಞರಿಂದ ವರದಿ

ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ.

ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ ಅತಿಯಾದ ತೂಕ, ರೆಡ್ ಮೀಟ್, ಮದ್ಯಪಾನ, ಧೂಮಪಾನ ಮತ್ತು ಪಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರುವುದೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. ಈ ಬಗ್ಗೆ ಅಳವಾದ ಅಧ್ಯಯನ ನಡೆಸಲಿ ತಾಂತ್ರಿಕ ಸಮಿತಿ ನಿರ್ಧರಿಸಿದೆ.

ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿತ್ತು. ಹೀಗಾಗಿ, ಸಾವಿಗೆ ಕಾರಣ ಏನು ಎನ್ನುವುದನ್ನು ತಿಳಿಯಲು ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ ವರದಿ ನೀಡುವಂತೆ 12 ಜನ ತಜ್ಞರ ಸಮಿತಿಗೆ ಸರ್ಕಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಾಥಮಿಕ ವರದಿಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.

ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧಪಡಿಸಿರುವ ಜಯದೇವ ತಜ್ಞರು ತಾಂತ್ರಿಕ ಸಮಿತಿಯ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅತಿಯಾದ ತೂಕ, ಧೂಮಪಾನ ಮತ್ತು ಪಾಸ್ಟ್ ಫುಡ್ ಆಹಾರ ಸೇವನೆಯಿಂದ ಸಡನ್ ಡೆತ್ ಸಂಭವಿಸುತ್ತಿದೆ. ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅನುವಂಶೀಯತೆ ಹೃದಯಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ಹೇಳಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago