what is the cause of sudden heart attack death
ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ.
ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ ಅತಿಯಾದ ತೂಕ, ರೆಡ್ ಮೀಟ್, ಮದ್ಯಪಾನ, ಧೂಮಪಾನ ಮತ್ತು ಪಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರುವುದೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. ಈ ಬಗ್ಗೆ ಅಳವಾದ ಅಧ್ಯಯನ ನಡೆಸಲಿ ತಾಂತ್ರಿಕ ಸಮಿತಿ ನಿರ್ಧರಿಸಿದೆ.
ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿತ್ತು. ಹೀಗಾಗಿ, ಸಾವಿಗೆ ಕಾರಣ ಏನು ಎನ್ನುವುದನ್ನು ತಿಳಿಯಲು ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ ವರದಿ ನೀಡುವಂತೆ 12 ಜನ ತಜ್ಞರ ಸಮಿತಿಗೆ ಸರ್ಕಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಾಥಮಿಕ ವರದಿಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.
ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧಪಡಿಸಿರುವ ಜಯದೇವ ತಜ್ಞರು ತಾಂತ್ರಿಕ ಸಮಿತಿಯ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅತಿಯಾದ ತೂಕ, ಧೂಮಪಾನ ಮತ್ತು ಪಾಸ್ಟ್ ಫುಡ್ ಆಹಾರ ಸೇವನೆಯಿಂದ ಸಡನ್ ಡೆತ್ ಸಂಭವಿಸುತ್ತಿದೆ. ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅನುವಂಶೀಯತೆ ಹೃದಯಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ಹೇಳಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…