ರಾಜ್ಯ

ಹಠತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು? : ಸರ್ಕಾರಕ್ಕೆ ವರದಿ ಸಲ್ಲಿಸಿದ ತಜ್ಞರ ಸಮಿತಿ

ಬೆಂಗಳೂರು : ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಾಂತ್ರಿಕ ಸಲಹಾಮಿತಿ ಅಧ್ಯಯನ ತಿಳಿಸಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದಿಂದ ಸರಣಿ ಸಾವುಗಳಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಿತ್ತು. ಈ ಸಮಿತಿಯು ಜುಲೈ 2 ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಈ ವರ್ಷದ ಏಪ್ರಿಲ್ ಮತ್ತು ಮೇ ನಡುವೆ ಹೃದ್ರೋಗ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ 45 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿದ್ದು, ಎರಡು ತಿಂಗಳ ಪ್ರಾಯೋಗಿಕ ಅಧ್ಯಯನದ ನಂತರ ಈ ವರದಿ ಸಲ್ಲಿಸಲಾಗಿದೆ.

ಈ ಪೈಕಿ 19 ರೋಗಿಗಳಿಗೆ ಈ ಹಿಂದೆ ಕೋವಿಡ್ ಸೋಂಕು ತಗುಲಿದ್ದರೂ ಮತ್ತು ಬಹುತೇಕ ಎಲ್ಲರೂ (251 ರಲ್ಲಿ 249) ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ, ಈ ಅಂಶಗಳು ಹೃದಯಾಘಾತ ಅಥವಾ ಹಠಾತ್ ಹೃದಯಾಘಾತಕ್ಕೆ ನೇರವಾಗಿ ಕಾರಣವಾಗಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ತಜ್ಞರ ಸಮಿತಿ ತೀರ್ಮಾನಿಸಿದೆ.

ಬೆಂಗಳೂರಿನಿಂದ ಶೇ. 47 ರಷ್ಟು ಬಂದಿದ್ದು, ತುಮಕೂರು ಶೇ. 8, ಮಂಡ್ಯ, ಕೋಲಾರ ಮತ್ತು ರಾಮನಗರ ತಲಾ ಶೇ. 5 ಮತ್ತು ಕರ್ನಾಟಕದ ಇತರ ಜಿಲ್ಲೆಗಳಿಂದ ಒಟ್ಟು ಶೇ. 22 ರಷ್ಟು ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ ಎಂದು ವರದಿ ತಿಳಿಸಿದೆ.

30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.

ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕಿನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ.

ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ.

ಸಮಿತಿಯ ಶಿಫಾರಸುಗಳು ಇಂತಿವೆ… 

ಯುವಕರು ಹಠಾತ್ ಹೃದಯಾಘಾತದಿಂದ ಸಾವು ಪತ್ತೆಹಚ್ಚಲು ರಾಷ್ಟ್ರೀಯ ನೋಂದಣಿ ಮತ್ತು ಹೃದಯ ಕಣ್ಗಾವಲು ಕಾರ್ಯಕ್ರಮ ಆರಂಭಿಸಿ.

ವಯಸ್ಸಿನ ಗುಂಪಿನಲ್ಲಿ ವಿವರಿಸಲಾಗದ ಸಾವುಗಳಿಗೆ ಶವಪರೀಕ್ಷೆ ಆಧಾರಿತ ವರದಿ ಕಡ್ಡಾಯಗೊಳಿಸಿ.

ಆನುವಂಶಿಕ ಹೃದಯ ಕಾಯಿಲೆಗಳನ್ನು ಮೊದಲೇ ಪತ್ತೆಹಚ್ಚಲು ಶಾಲೆಗಳಲ್ಲಿ ನಿಯಮಿತ ಹೃದಯ ತಪಾಸಣೆ ಪ್ರಾರಂಭಿಸಿ.

ಜೀವನಶೈಲಿಗೆ ಸಂಬಂಧಿಸಿದ ಹೃದಯ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಸಾರ್ವಜನಿಕ ಆರೋಗ್ಯ ಅಭಿಯಾನಗಳನ್ನು ಕೈಗೊಳ್ಳಿ.

ಧೂಮಪಾನವನ್ನು ನಿಲ್ಲಿಸುವುದು, ಸ್ಕ್ರೀನ್ ಟೈಮ್ ಕಡಿಮೆ ಮಾಡುವುದು, ಸಕ್ಕರೆ/ಉಪ್ಪು ಸೇವನೆ ನಿಯಂತ್ರಣ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿರ್ವಹಣೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago