ಬೆಂಗಳೂರು : ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಯಲಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್ ಅವರು ಮಧ್ಯಸ್ಥಿಕೆ ವಿಹಿಸುತ್ತಿದ್ದು, ಕಾನೂನು ವ್ಯವಸ್ಥೆಗೂ, ರಾಜ್ಯಪಾಲರಿಗೂ ಏನು ಸಂಬಂಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಸಂಬಂಧ ರಾಜ್ಯಪಾಲರು ಪದೇ ಪದೇ ತನಿಖೆ ಆಗುತ್ತಿದೆಯೇ ಎಂದು ಕೇಳುತ್ತಿದ್ದು, ಒತ್ತಡ ಹಾಕುತ್ತಿದ್ದಾರೆ. ರಾಜ್ಯಪಾಲರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯವರು ಕೇಳಿದ್ದಾರೆ. ರಾಜ್ಯಪಾಲರಿಗೆ ಯಾಕಿಷ್ಟು ಆಸಕ್ತಿ ಎಂಬುದನ್ನು ಗಮನಿಸಬೇಕು. ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ನಿರ್ದೇಶನವಿದೆಯಾ ಅಥವಾ, ಸರ್ಕಾರ ಮತ್ತು ಹರಿಪ್ರಸಾದ್ಗೆ ಮುಜುಗರ ತರಬೇಕು ಎಂದು ಇದೆಯಾ? ಏನೇ ಇದ್ದರೂ ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ. ರಾಜ್ಯಪಾಲರಿಗೂ, ಕಾನೂನು ವ್ಯವಸ್ಥೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.
ಎಲ್ಲೆಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇಲ್ಲ ಅಲ್ಲಲ್ಲಿ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ಹಿಂದಿನ ಸರ್ಕಾರ ಇದ್ದಾಗ ಯಾವತ್ತೂ ಈ ರೀತಿ ಆಗಿಲ್ಲ. ಈ ಬಾರಿ ಯಾಕೆ ಈ ರೀತಿ ಆಗುತ್ತಿದೆ. ಜನ ಇದರ ಬಗ್ಗೆ ವಿಚಾರ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…