ರಾಜ್ಯ

ರಾಜ್ಯಪಾಲರಿಗೂ, ಕಾನೂನು ವ್ಯವಸ್ಥೆಗೂ ಏನು ಸಂಬಂಧ?: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಯಲಿದೆ ಎಂಬ ಕಾಂಗ್ರೆಸ್‌ ನಾಯಕ ಹರಿಪ್ರಸಾದ್‌ ಹೇಳಿಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್‌ ಅವರು ಮಧ್ಯಸ್ಥಿಕೆ ವಿಹಿಸುತ್ತಿದ್ದು, ಕಾನೂನು ವ್ಯವಸ್ಥೆಗೂ, ರಾಜ್ಯಪಾಲರಿಗೂ ಏನು ಸಂಬಂಧ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಈ ಸಂಬಂಧ ರಾಜ್ಯಪಾಲರು ಪದೇ ಪದೇ ತನಿಖೆ ಆಗುತ್ತಿದೆಯೇ ಎಂದು ಕೇಳುತ್ತಿದ್ದು, ಒತ್ತಡ ಹಾಕುತ್ತಿದ್ದಾರೆ. ರಾಜ್ಯಪಾಲರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯವರು ಕೇಳಿದ್ದಾರೆ. ರಾಜ್ಯಪಾಲರಿಗೆ ಯಾಕಿಷ್ಟು ಆಸಕ್ತಿ ಎಂಬುದನ್ನು ಗಮನಿಸಬೇಕು. ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ನಿರ್ದೇಶನವಿದೆಯಾ ಅಥವಾ, ಸರ್ಕಾರ ಮತ್ತು ಹರಿಪ್ರಸಾದ್‌ಗೆ ಮುಜುಗರ ತರಬೇಕು ಎಂದು ಇದೆಯಾ? ಏನೇ ಇದ್ದರೂ ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ. ರಾಜ್ಯಪಾಲರಿಗೂ, ಕಾನೂನು ವ್ಯವಸ್ಥೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಎಲ್ಲೆಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇಲ್ಲ ಅಲ್ಲಲ್ಲಿ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ಹಿಂದಿನ ಸರ್ಕಾರ ಇದ್ದಾಗ ಯಾವತ್ತೂ ಈ ರೀತಿ ಆಗಿಲ್ಲ. ಈ ಬಾರಿ ಯಾಕೆ ಈ ರೀತಿ ಆಗುತ್ತಿದೆ. ಜನ ಇದರ ಬಗ್ಗೆ ವಿಚಾರ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

 

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

3 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

3 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

20 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

23 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 day ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 day ago