ರಾಜ್ಯ

ದರ್ಶನ್‌ ಮೇಲಿನ ಆರೋಪ ಸಾಬೀತಾದರೆ ಶಿಕ್ಷೆ ಏನು ?

ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣನದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಆರೋಪಿ ನಂ2 ಎಂದು ಪರಿಗಣಿಸಿ ಪೊಲೀಸರು ಬಂಧಿಸಿದ್ದಾರೆ.

ಬಂಧನದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಇದೀಗ ದರ್ಶನ್‌ ಸೇರಿ 13ಮಂದಿ ಆರೋಪಿಗಳನ್ನು ಪೊಲೀಸ್‌ ಕಸ್ಟ್‌ಡಿಗೆ ನೀಡಲಾಗಿದೆ. ಒಂದು ವೇಳೆ ಈ ಪ್ರಕರಣದಲ್ಲಿ ದರ್ಶನ್‌ ಅಪರಾಧಿ ಎಂದು ಸಾಬೀತಾದರೇ ಶಿಕ್ಷೆ ಏನು ಎಂಬುದು ಎಲ್ಲರಲ್ಲೂ ಮೂಡಿರುವ ಪ್ರಶ್ನೆಯಾಗಿದೆ.

ಒಂದು ವೇಳೆ ನಟ ದರ್ಶನ್‌ ಈ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದರೆ, ಪ್ರಕರಣದಲ್ಲಿ ದರ್ಶನ್‌ ನೇರವಾಗಿ ಭಾಗಿಯಾಗಿದ್ದರೆ,  ಸೆಕ್ಷನ್‌ 302, ಸಾಕ್ಷಿ ನಾಶಕ್ಕಾಗಿ ಸೆಕ್ಷನ್‌ 201 ಮತ್ತು ಕಿಡ್ನಾಪ್‌ ಕೇಸ್‌ ಬುಕ್‌ ಮಾಡಲಾಗುತ್ತದೆ.

ಒಂದು ವೇಳೆ ದರ್ಶನ್‌ ಸೂಚನೆ ಮೇರೆಗೆ ಈ ಕೃತ್ಯ ನಡೆದಿದ್ದರೆ 120ಬಿ ಪ್ರಕರಣ ದಾಖಲು ಮಾಡಲಾಗುತ್ತದೆ. ಸೆಕ್ಷನ್‌ 120ಬಿ ದಾಖಲಾದಲ್ಲಿ ಸೆಕ್ಷನ್‌ 302 ಅಪರಾಧಿಗೆ ನೀಡುವ ಶಿಕ್ಷೆಯನ್ನೇ ನೀಡುವ ಸಾಧ್ಯತೆ ಇರುತ್ತದೆ. ಉದಾಹರಣೆಗೆ ಜೀವಾವಧಿ ಅಥವ ಮರಣದಂಡನೆ ವಿಧಿಸುವ ಸಾಧ್ಯತೆ ಇರುತ್ತದೆ.

ಆದರೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಯಾವ ಶಿಕ್ಷೆ ನೀಡಲಾಗುತ್ತದೆ ಎಂದು ಈಗಲೇ ಹೇಳಲು ಸಾಧ್ಯವಾಗುವುದಿಲ್ಲ ಎಂದು ವಕೀಲರು

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

6 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

6 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

6 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

12 hours ago