ರಾಜ್ಯ

ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ : ಸಿದ್ದರಾಮಯ್ಯ ನಂತರ ಅಹಿಂದ ನಾಯಕತ್ವ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಸಮರ್ಥರಾಗಿದ್ದಾರೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರಿ ಕರ್ನಾಟಕದಲ್ಲಿ ರಾಜ್ಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ನವೆಂಬರ್‌ ಮೊದಲ ದಿನಕ್ಕೆ ಇನ್ನೇನು ಕೆಲವೇ ದಿನಕ್ಕೂ ಮುನ್ನವೇ ನವೆಂಬರ್‌ ಕ್ರಾಂತಿ ಬಗ್ಗೆ ಭಾರಿ ಪೈಪೋಟಿ ಜೋರಾಗಿದೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯತೀಂಂದ್ರ ಸಿದ್ದರಾಮಯ್ಯನವರು ಅಹಿಂದ ನಾಯಕತ್ವದ ಬಗ್ಗೆ ಮಾತನಾಡಿದ್ದು, ಸಿಎಂ, ಡಿಸಿಎಂ ಬದಲಾವಣೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಅಲ್ಲ. ಪಕ್ಷವೇ ಬೇರೆ, ಅಹಿಂದ ಸಂಘಟನೆಯೇ ಬೇರೆ. ಸಿಎಂ ಸ್ಥಾನಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಯತೀಂದ್ರ ಹೇಳಿಕೆಯಲ್ಲಿ ತಪ್ಪೇನಿದೆ?
ಯತೀಂದ್ರ ಅವರು ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರ ದಾರಿಯಲ್ಲೇ ಹೋಗ್ತಾರೆ ಸತೀಶ್ ಅಂತ ಹೇಳಿದ್ದಾರೆ ಅಹಿಂದ ಪ್ರಾರಂಭ ಆದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಅವರು ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

36 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

47 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago