ರಾಜ್ಯ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೆಹಲಿ ಪ್ರವಾಸದ ಬಗ್ಗೆ ಕೇಳಿದಾdಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ” ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಗೊಂದಲಗಳು ಇವೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಾರ್ಟಿಯಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಿದಾಗ, “ನಿಮಗೆ ಈ ಬಗ್ಗೆ ಗೊಂದಲ ಇರಬಹುದು. ನಾನು ಈ ಬಗ್ಗೆ ಯಾವತ್ತು ಚರ್ಚೆ ಮಾಡಲ್ಲ. ಹೈಕಮಾಂಡ್ ಯಾವಾಗ ಯಾವ ಸೂಚನೆ ನೀಡುತ್ತದೆಯೋ ಆವಾಗ ಅದನ್ನು ಪಾಲಿಸುತ್ತೇವೆ ಎಂದು ನಾನು ಹಾಗೂ ಸಿಎಂ ಅವರು ಹೇಳಿದ್ದು, ಅದರಂತೆ ನಡೆಯುತ್ತೇವೆ” ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago