ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೆಹಲಿ ಪ್ರವಾಸದ ಬಗ್ಗೆ ಕೇಳಿದಾdಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ” ಎಂದು ಸ್ಪಷ್ಟಪಡಿಸಿದರು.
ಪಕ್ಷದಲ್ಲಿ ಗೊಂದಲಗಳು ಇವೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಾರ್ಟಿಯಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದರು.
ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಿದಾಗ, “ನಿಮಗೆ ಈ ಬಗ್ಗೆ ಗೊಂದಲ ಇರಬಹುದು. ನಾನು ಈ ಬಗ್ಗೆ ಯಾವತ್ತು ಚರ್ಚೆ ಮಾಡಲ್ಲ. ಹೈಕಮಾಂಡ್ ಯಾವಾಗ ಯಾವ ಸೂಚನೆ ನೀಡುತ್ತದೆಯೋ ಆವಾಗ ಅದನ್ನು ಪಾಲಿಸುತ್ತೇವೆ ಎಂದು ನಾನು ಹಾಗೂ ಸಿಎಂ ಅವರು ಹೇಳಿದ್ದು, ಅದರಂತೆ ನಡೆಯುತ್ತೇವೆ” ಎಂದು ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…