ರಾಜ್ಯ

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ಯಾಕೆ ಪೂರ್ಣಗೊಳಿಸಿಲ್ಲ: ಸಿಬಿಐಗೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್‌ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ ವರದಿ ಸಲ್ಲಿಸದಿರುವ ಕುರಿತು ಶುಕ್ರವಾರ ಹೈಕೋರ್ಟ್‌(ಏ.೫) ಮೌಖಿಕವಾಗಿ ಪ್ರಶ್ನಿಸಿದೆ.

ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆಯ ಅಂತಿಮ ಹಂತದಲ್ಲಿ ನ್ಯಾ. ಅಡಿಗ ಅವರು ಸಿಬಿಐ ಇನ್ನೂ ವಿಚಾರಣೆ ಆರಂಭಿಸಿಲ್ಲವೇ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಧ್ವನಿಗೂಡಿಸಿದ ನ್ಯಾ. ಸೋಮಶೇಖರ್‌ ಅವರು, ಸಿಬಿಐ ಯಾವಾಗ ಎಫ್‌ಐಆರ್‌ ದಾಖಲಿಸಿತು ಎಂದು ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್‌ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಪ್ರಸನ್ನ ಕುಮಾರ್‌ ಅವರು 2020ರ ಅಕ್ಟೋಬರ್‌ 3ರಂದು ಎಫ್‌ಐಆರ್‌ ದಾಖಲಿಸಲಾಗಿದೆ. ಎರಡು ವರ್ಷ ಕೋವಿಡ್‌ನಿಂದಾಗಿ ತನಿಖೆ ನಡೆಸಲಾಗಿಲ್ಲ. ಒಂದು ವರ್ಷ ಅರ್ಜಿದಾರರು ಪ್ರಕರಣದ ವಿಚಾರಣೆಗೆ ತಡೆ ಪಡೆದುಕೊಂಡಿದ್ದರಿಂದ ಯಾವುದೇ ಬೆಳವಣಿಗೆಯಾಗಿಲ್ಲ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ ಅವರು ಆರು ಅರ್ಜಿಗಳನ್ನು ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದ್ದಾರೆ ಎಂದರು. ಈ ಸಂಬಂಧ ವಿಸ್ತೃತ ಬೆಳವಣಿಗೆಯನ್ನು ನ್ಯಾಯಾಲಯದ ಮುಂದಿಡಲಾಗುವುದು ಎಂದು ಸಮಜಾಯಿಷಿ ನೀಡಿದರು. ವಾದ ಆಲಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 18ಕ್ಕೆ ವಿಚಾರಣೆ ಮುಂದೂಡಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

6 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

9 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

10 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

12 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

15 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

15 hours ago