ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ ಬಿಜೆಪಿಗೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಇಡೀ ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು ಎಂಬ ವಿಚಾರ ಹೊಂದಿದ್ದಾರೆ. ಹೀಗಾಗಿ ದೇಶದ ವಿಚಾರ ಬಂದಾಗ ಬಿಜೆಪಿಗರು ಮುಂದೆ ಬಂದು ಹೊಂದಾಣಿಕೆಯ ಪ್ರಸ್ತಾಪವಿಟ್ಟರೆ ಅದಕ್ಕೆ ನಾನು ಸ್ಪಂದಿಸುತ್ತೇನೆ. ಹೊಂದಾಣಿಕೆ ಎಂಬುವುದು ನನ್ನ ಮಾತೃಪಕ್ಷ ಬಿಜೆಪಿಯೊಂದಿಗೆ ಮಾತ್ರ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ನನ್ನ ಪಕ್ಷದಿಂದ ಅಭ್ಯರ್ಥಿ ಹಾಕುವಷ್ಟು ಶಕ್ತಿ ನನಗಿಲ್ಲ. ಅದಕ್ಕೆ ಸಮಯವೂ ಇಲ್ಲ. ಹೀಗಾಗಿ ನಾನು ಮೊದಲಿನಿಂದಲೂ ನನ್ನದು ಒಂದೇ ನಿಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದಿಂದ ಐದಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಆ ಕ್ಷೇತ್ರಗಳಲ್ಲಿ ನನ್ನ ಶಕ್ತಿ ಮೀರಿ ನನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಯತ್ನ ಮಾಡುತ್ತೇನೆ ಎಂದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…