ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ ಬಿಜೆಪಿಗೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಇಡೀ ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು ಎಂಬ ವಿಚಾರ ಹೊಂದಿದ್ದಾರೆ. ಹೀಗಾಗಿ ದೇಶದ ವಿಚಾರ ಬಂದಾಗ ಬಿಜೆಪಿಗರು ಮುಂದೆ ಬಂದು ಹೊಂದಾಣಿಕೆಯ ಪ್ರಸ್ತಾಪವಿಟ್ಟರೆ ಅದಕ್ಕೆ ನಾನು ಸ್ಪಂದಿಸುತ್ತೇನೆ. ಹೊಂದಾಣಿಕೆ ಎಂಬುವುದು ನನ್ನ ಮಾತೃಪಕ್ಷ ಬಿಜೆಪಿಯೊಂದಿಗೆ ಮಾತ್ರ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ನನ್ನ ಪಕ್ಷದಿಂದ ಅಭ್ಯರ್ಥಿ ಹಾಕುವಷ್ಟು ಶಕ್ತಿ ನನಗಿಲ್ಲ. ಅದಕ್ಕೆ ಸಮಯವೂ ಇಲ್ಲ. ಹೀಗಾಗಿ ನಾನು ಮೊದಲಿನಿಂದಲೂ ನನ್ನದು ಒಂದೇ ನಿಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದಿಂದ ಐದಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಆ ಕ್ಷೇತ್ರಗಳಲ್ಲಿ ನನ್ನ ಶಕ್ತಿ ಮೀರಿ ನನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಯತ್ನ ಮಾಡುತ್ತೇನೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…