ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ ಬಿಜೆಪಿಗೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಇಡೀ ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು ಎಂಬ ವಿಚಾರ ಹೊಂದಿದ್ದಾರೆ. ಹೀಗಾಗಿ ದೇಶದ ವಿಚಾರ ಬಂದಾಗ ಬಿಜೆಪಿಗರು ಮುಂದೆ ಬಂದು ಹೊಂದಾಣಿಕೆಯ ಪ್ರಸ್ತಾಪವಿಟ್ಟರೆ ಅದಕ್ಕೆ ನಾನು ಸ್ಪಂದಿಸುತ್ತೇನೆ. ಹೊಂದಾಣಿಕೆ ಎಂಬುವುದು ನನ್ನ ಮಾತೃಪಕ್ಷ ಬಿಜೆಪಿಯೊಂದಿಗೆ ಮಾತ್ರ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ನನ್ನ ಪಕ್ಷದಿಂದ ಅಭ್ಯರ್ಥಿ ಹಾಕುವಷ್ಟು ಶಕ್ತಿ ನನಗಿಲ್ಲ. ಅದಕ್ಕೆ ಸಮಯವೂ ಇಲ್ಲ. ಹೀಗಾಗಿ ನಾನು ಮೊದಲಿನಿಂದಲೂ ನನ್ನದು ಒಂದೇ ನಿಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದಿಂದ ಐದಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಆ ಕ್ಷೇತ್ರಗಳಲ್ಲಿ ನನ್ನ ಶಕ್ತಿ ಮೀರಿ ನನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಯತ್ನ ಮಾಡುತ್ತೇನೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…