ರಾಜ್ಯ

ಹೊಂದಾಣಿಕೆ ವಿಚಾರ ಬಂದರೇ ಮೊದಲ ಆಧ್ಯತೆ ಮಾತೃ ಪಕ್ಷ ಬಿಜೆಪಿಗೆ : ಜನಾರ್ಧನ ರೆಡ್ಡಿ!

ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ  ಬಿಜೆಪಿಗೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಇಡೀ ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು ಎಂಬ ವಿಚಾರ ಹೊಂದಿದ್ದಾರೆ. ಹೀಗಾಗಿ ದೇಶದ ವಿಚಾರ ಬಂದಾಗ ಬಿಜೆಪಿಗರು ಮುಂದೆ ಬಂದು ಹೊಂದಾಣಿಕೆಯ ಪ್ರಸ್ತಾಪವಿಟ್ಟರೆ ಅದಕ್ಕೆ ನಾನು ಸ್ಪಂದಿಸುತ್ತೇನೆ. ಹೊಂದಾಣಿಕೆ ಎಂಬುವುದು ನನ್ನ ಮಾತೃಪಕ್ಷ ಬಿಜೆಪಿಯೊಂದಿಗೆ ಮಾತ್ರ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ನನ್ನ ಪಕ್ಷದಿಂದ ಅಭ್ಯರ್ಥಿ ಹಾಕುವಷ್ಟು ಶಕ್ತಿ ನನಗಿಲ್ಲ. ಅದಕ್ಕೆ ಸಮಯವೂ ಇಲ್ಲ. ಹೀಗಾಗಿ ನಾನು ಮೊದಲಿನಿಂದಲೂ ನನ್ನದು ಒಂದೇ ನಿಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದಿಂದ ಐದಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಆ ಕ್ಷೇತ್ರಗಳಲ್ಲಿ ನನ್ನ ಶಕ್ತಿ ಮೀರಿ ನನ್ನ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಯತ್ನ ಮಾಡುತ್ತೇನೆ ಎಂದರು.

andolanait

Recent Posts

ಚಾಮರಾಜನಗರ: ಹುಲಿ ದಾಳಿಗೆ 3 ಮೇಕೆಗಳು ಬಲಿ

ಪ್ರಸಾದ್‌ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು  ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3…

19 mins ago

ಇರಾನ್‌ ಮೇಲೆ ಅಮೇರಿಕಾ ವಾಯುದಾಳಿ: ರೇಡಾರ್‌ ಕೇಂದ್ರಗಳು ಧ್ವಂಸ

ವಾಷಿಂಗ್ಟನ್:‌ ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್‌ ಮತ್ತು ಡ್ರೋನ್‌ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್‌…

24 mins ago

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

1 hour ago

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…

1 hour ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

6 hours ago