ಬೆಂಗಳೂರು: ನಾನು ಒಕ್ಕಲಿಗ ನಾಯಕನೆಂದು ಎಲ್ಲಿ ಹೇಳಿದ್ದೇನೆ, ನನ್ನ ಮುಂದೆ ಕನಕಪುರದಲ್ಲಿ ಡಿಚ್ಚಿ ಹೊಡಿತಿನೆಂದು ಬಂದು ನಿಂತರಲ್ಲಾ ಡೆಪಾಸಿಟ್ ಬಂತಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ವಿಕಾಸಸೌಧದಲ್ಲಿ ಇಂದು(ನ.25) ಆರ್.ಅಶೋಕ್ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನ ಯಾವತ್ತು ನಾಯಕನೆಂದು ಹೇಳಿದ್ದೆ? ಕನಕಪುರ ಕ್ಷೇತ್ರದಲ್ಲಿ ಕಂದಾಯ ಸಚಿವರಾಗಿ ಬಂದು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಾಗ ಎಷ್ಟು ಡೆಪಾಸಿಟ್ ತಂಗೋಡ್ಯಪ್ಪ, ನನ್ನ ಮೇಲೆ ಕುಸ್ತಿ ಮಾಡುತ್ತೇನೆಂದು ಹೇಳಿದ್ದೆ. ಆದರೆ ಆ ಕ್ಷೇತ್ರದಲ್ಲಿ ನಿನಗೆ ಎಷ್ಟು ಮತಗಳು ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
ತಮ್ಮ ಚುನಾವಣೆಯಲ್ಲಿ ಸೋತಿದ್ದಾನೆ ನಿಜ. ಆದರೆ ಸೋಲಿಸಿದ ಕೊಂಡಿಗಳು ಒಂದೊಂದೆ ಕಳಚಿ ಹೋಗಿವೆ. ರಾಜರಾಜೇಶ್ವರಿ ನಗರ ಹಾಗೂ ಚನ್ನಪಟ್ಟಣದಲ್ಲಿ ಏನೆಲ್ಲಾ ಆಯಿತು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಇತಿಹಾಸಗಳನ್ನು ನಾನು ಹೇಳೋಕೆ ಹೋಗಲ್ಲ . ನನಗೂ ಪಾಲಿಟಿಕ್ಸ್ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…