ರಾಜ್ಯ

ರಾಜಧಾನಿಯ ಶಾಲೆಗಳಿಗೆ ಬೆದರಿಕೆ ಕರೆ ಬಂದಿದ್ದು ಎಲ್ಲಿಂದ ? ಪೊಲೀಸರಿಗೆ ಸಿಕ್ತಾ ಆರೋಪಿಗಳ ಜಾಲ!

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬಂದ ಹುಸಿ ಬಾಂಬ್‌ ಕರೆ ರಾಜ್ಯದ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಬೆಂಗಳೂರು ಗ್ರಾಮಾಂತರ ಸೇರಿದಂತೆ 64 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಕೂಡಲೆ ಎಚ್ಚೆತ್ತ ಪೊಲೀಸ್‌ ಸಿಬ್ಬಂಧಿ ಕೃತ್ಯವೆಸೆಗಿದವರ ಜಾಲ ಪತ್ತೆ ಮಾಡಲು ಮುಂದಾಗಿದ್ದಾರೆ.

ಮುಖ್ಯವಾಗಿ ಬೆದರಿಕೆ ಇಮೇಲ್​ನಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಶಾಲೆಗಳಿಗೆ ಬಾಂಬ್‌ ಬೆದರಿಕೆಯನ್ನ ಇಮೇಲ್‌ ಐಡಿಗಳ ಮೂಲಕ ಕಳುಹಿಸಿಲಾಗಿದ್ದು, ಎಲ್ಲಾ ಇಮೇಲ್‌ ಗಳನ್ನ kharijites@beeble.com ನಿಂದ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇಮೇಲ್‌ಗಳು ಜೆಕ್‌ ರಿಪಬ್ಲಿಕ್‌ ಮತ್ತು ಸ್ಲೋವಾಕಿಯಾದಿಂದ ಹುಟ್ಟಿಕೊಂಡಿವೆ ಎಂದು ಶಂಕಿಸಲಾಗಿದೆ.

ಶುಕ್ರವಾರದ ಘಟನೆಯಲ್ಲಿ, ಬಾಂಬ್ ಬೆದರಿಕೆಯ ಮೇಲ್ ಗಮನಕ್ಕೆ ಬಂದ ಮೊದಲ ಶಾಲೆಗಳಲ್ಲಿ ಒಂದಾಗಿದೆ ಪೂರ್ವ ಬೆಂಗಳೂರಿನ ವೈಟ್‌ಫೀಲ್ಡ್‌ನ ಯೆಮ್ಲೂರಿನ ನೀವ್ ಅಕಾಡೆಮಿ. ಬೆಳಗ್ಗೆ 8 ಗಂಟೆ ಸುಮಾರಿಗೆ ಪಶ್ಚಿಮ ಬೆಂಗಳೂರಿನ ಬಸವೇಶ್ವರ ನಗರ, ಕೆಂಗೇರಿ ಮತ್ತು ಉತ್ತರದ ಯಲಹಂಕದ ಹೆಚ್ಚಿನ ಶಾಲೆಗಳು ಬೆದರಿಕೆ ಇಮೇಲ್‌ಗಳು ಬಂದಿರುವ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ನೀಡಿವೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು, ತನಿಖೆ ತೀವ್ರಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

29 mins ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

38 mins ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

47 mins ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

1 hour ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

1 hour ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

1 hour ago