ಬೆಂಗಳೂರು: ಖಾಸಗಿ ಶಾಲೆಗಳಿಗೆ ಬಂದ ಹುಸಿ ಬಾಂಬ್ ಕರೆ ರಾಜ್ಯದ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಬೆಂಗಳೂರು ಗ್ರಾಮಾಂತರ ಸೇರಿದಂತೆ 64 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೆ ಎಚ್ಚೆತ್ತ ಪೊಲೀಸ್ ಸಿಬ್ಬಂಧಿ ಕೃತ್ಯವೆಸೆಗಿದವರ ಜಾಲ ಪತ್ತೆ ಮಾಡಲು ಮುಂದಾಗಿದ್ದಾರೆ.
ಮುಖ್ಯವಾಗಿ ಬೆದರಿಕೆ ಇಮೇಲ್ನಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನ ಇಮೇಲ್ ಐಡಿಗಳ ಮೂಲಕ ಕಳುಹಿಸಿಲಾಗಿದ್ದು, ಎಲ್ಲಾ ಇಮೇಲ್ ಗಳನ್ನ kharijites@beeble.com ನಿಂದ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇಮೇಲ್ಗಳು ಜೆಕ್ ರಿಪಬ್ಲಿಕ್ ಮತ್ತು ಸ್ಲೋವಾಕಿಯಾದಿಂದ ಹುಟ್ಟಿಕೊಂಡಿವೆ ಎಂದು ಶಂಕಿಸಲಾಗಿದೆ.
ಶುಕ್ರವಾರದ ಘಟನೆಯಲ್ಲಿ, ಬಾಂಬ್ ಬೆದರಿಕೆಯ ಮೇಲ್ ಗಮನಕ್ಕೆ ಬಂದ ಮೊದಲ ಶಾಲೆಗಳಲ್ಲಿ ಒಂದಾಗಿದೆ ಪೂರ್ವ ಬೆಂಗಳೂರಿನ ವೈಟ್ಫೀಲ್ಡ್ನ ಯೆಮ್ಲೂರಿನ ನೀವ್ ಅಕಾಡೆಮಿ. ಬೆಳಗ್ಗೆ 8 ಗಂಟೆ ಸುಮಾರಿಗೆ ಪಶ್ಚಿಮ ಬೆಂಗಳೂರಿನ ಬಸವೇಶ್ವರ ನಗರ, ಕೆಂಗೇರಿ ಮತ್ತು ಉತ್ತರದ ಯಲಹಂಕದ ಹೆಚ್ಚಿನ ಶಾಲೆಗಳು ಬೆದರಿಕೆ ಇಮೇಲ್ಗಳು ಬಂದಿರುವ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ನೀಡಿವೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು, ತನಿಖೆ ತೀವ್ರಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…