ರಾಜ್ಯ

ದೇವರಾಜ ಅರಸು ಎಲ್ಲಿ? ಇವರೆಲ್ಲಿ? : ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಅದಕ್ಷ, ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್ಸಿಗೆ ಮತದಾರರು ಬುದ್ಧಿ ಕಲಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿಕೊಳ್ಳುವ ಇವರಿಗೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಎರಡೂವರೆ ವರ್ಷಗಳ ಆಡಳಿತ ಇತಿಹಾಸ ಸೇರುವಂತಹ ಕೆಟ್ಟ ಆಡಳಿತವಾಗಿದೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ಡ್ರಗ್ಸ್ ಮಾಫಿಯಾ, ಮಾರ್ಯಾದಾ ಹತ್ಯೆ ಪ್ರಕರಣಗಳು ನಿರಂತರವಾಗಿವೆ. ಇದನ್ನು ಹತ್ತಿಕ್ಕಲು ಸಾಧ್ಯವಾಗದೆ, ದಾಖಲೆಗೋಸ್ಕರ ಸಿದ್ದರಾಮಯ್ಯ ಆಡಳಿತ ನಡೆಸುತ್ತಿರುವಂತಿದೆ. ಅಧಿಕಾರಿಗಳು ಗುಲಾಮರಾಗಿದ್ದಾರೆ. ಅಧಿಕಾರಿಗಳು ಇವರ ಆಡಳಿತದಲ್ಲಿ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ, ಸ್ವಾತಂತ್ರ್ಯ ಎಂಬುದೇ ಇಲ್ಲ, ಬ್ಯಾಟರಿ ಹಾಕಿ ಹುಡುಕಿದರೂ ಒಬ್ಬ ಒಳ್ಳೆ ಅಧಿಕಾರಿ ಸಿಗುವುದಿಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಕಲಿಶ್ಯಾಮರಂತೆ ವರ್ತಿಸುತ್ತಿದ್ದಾರೆ, ಗೃಹ ಸಚಿವರಿಗೆ ಅಧಿಕಾರದ ಗತ್ತು ಎಂಬುದೇ ಗೊತ್ತಿಲ್ಲ, ಯಾವುದೇ ಪ್ರಕರಣ ನಡೆದರೂ ಎಸ್‌ಐಟಿ ರಚಿಸಿ ಕೈತೊಳೆದುಕೊಳ್ಳುವುದು, ನಾಜೂಕಯ್ಯನ ರೀತಿ ಮಾತನಾಡುವುದೊಂದೇ ತಿಳಿದಿರುವುದು ಎಂದು ಅವರು ಕಿಡಿಕಾರಿದರು.

ಓಂ ಶಕ್ತಿ ಭಕ್ತರ ಮೇಲೆ ಕಲ್ಲು; ಎಚ್ಡಿಕೆ ಖಂಡನೆ
ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲೆ ಹಾಕಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತರ ಮೇಲೆ ಕಲ್ಲು ಎಸೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಈ ಘಟನೆಯನ್ನು ಉಗ್ರವಾಗಿ ಖಂಡಿಸಿದ ಕೇಂದ್ರ ಸಚಿವರು; ಓಂ ಶಕ್ತಿಗೆ ಯಾತ್ರೆಗೆ ಹೊರಟಿರುವ ಹೆಣ್ಣು ಮಕ್ಕಳ ಮೇಲೆ ಕಲ್ಲು ಎಸೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿವೆ ಎಂಬುದು ಅರ್ಥವಾಗುತ್ತದೆ. ಇದಕ್ಕೆಲ್ಲಾ ಈ ಸರ್ಕಾರದ ನಡವಳಿಕೆಯೇ ಕಾರಣ ಎಂದು ಅವರು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

18 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

18 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

18 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

18 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

18 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

18 hours ago