ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಆಂತರಿಕವಾಗಿ ಆಗುತ್ತಿರುವ ಭಿನ್ನಾಭಿಪ್ರಾಯಗಳ ದುರ್ಬಳಕೆಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಚಿವ ಜಮೀರ್ ಅಹದ್ಖಾನ್ ಅವರನ್ನು ಮತ್ತೆ ಜಾ.ದಳಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬರುವ ಮುನ್ನವೇ ಅಲ್ಪಸಂಖ್ಯಾತ ನಾಯಕರ ಮೇಲೆ ಅನುಮಾನವೇಕೆ? ಅಲ್ಪಸಂಖ್ಯಾತರನ್ನು ನಾವೇ ರಕ್ಷಣೆ ಮಾಡುವುದು ಎಂದು ಹೇಳುವ ಕಾಂಗ್ರೆಸ್ನಲ್ಲಿ ಗೊಂದಲ ಏಕೆ ಮಾಡುತ್ತಿದ್ದಾರೆ. ಒಂದು ಸಮುದಾಯದ ಮೇಲೆ ಏಕೆ ಗದಾಪ್ರಹಾರ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಮೀರ್ ಅಹ್ಮದ್ಖಾನ್ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಅಲ್ಪಸಂಖ್ಯಾತ ನಾಯಕರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ? ಕ್ರಾಂತಿಯಾಗಲಿದೆ ಎಂದು ಹೇಳುತ್ತಿದ್ದರು. ಅದಕ್ಕಿದು ಮೂಲ ಆಗಬಹುದೆಂದು ಎಂದರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…