ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಆಂತರಿಕವಾಗಿ ಆಗುತ್ತಿರುವ ಭಿನ್ನಾಭಿಪ್ರಾಯಗಳ ದುರ್ಬಳಕೆಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಚಿವ ಜಮೀರ್ ಅಹದ್ಖಾನ್ ಅವರನ್ನು ಮತ್ತೆ ಜಾ.ದಳಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬರುವ ಮುನ್ನವೇ ಅಲ್ಪಸಂಖ್ಯಾತ ನಾಯಕರ ಮೇಲೆ ಅನುಮಾನವೇಕೆ? ಅಲ್ಪಸಂಖ್ಯಾತರನ್ನು ನಾವೇ ರಕ್ಷಣೆ ಮಾಡುವುದು ಎಂದು ಹೇಳುವ ಕಾಂಗ್ರೆಸ್ನಲ್ಲಿ ಗೊಂದಲ ಏಕೆ ಮಾಡುತ್ತಿದ್ದಾರೆ. ಒಂದು ಸಮುದಾಯದ ಮೇಲೆ ಏಕೆ ಗದಾಪ್ರಹಾರ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಮೀರ್ ಅಹ್ಮದ್ಖಾನ್ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಅಲ್ಪಸಂಖ್ಯಾತ ನಾಯಕರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ? ಕ್ರಾಂತಿಯಾಗಲಿದೆ ಎಂದು ಹೇಳುತ್ತಿದ್ದರು. ಅದಕ್ಕಿದು ಮೂಲ ಆಗಬಹುದೆಂದು ಎಂದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…