ರಾಜ್ಯ

ಟಿಕೆಟ್‌ ಯಾರಿಗೇ ನೀಡಿದರು ಕೈ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ : ಕೆ.ಹೆಚ್‌.ಮುನಿಯಪ್ಪ

ಬೆಂಗಳೂರು:  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಾನು 7 ಬಾರಿ ಗೆಲುವು ಸಾಧಿಸಿದ್ದೆ. ಅಲ್ಲಿ ಈ ಬಾರಿ ಬಿ.ಎಸ್.ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‍ನ ಭದ್ರಕೋಟೆ. ಇಲ್ಲಿ ಡಾ.ಎಂ.ಸಿ.ಸುಧಾಕರ್ ಉಸ್ತುವಾರಿ ಸಚಿವರಾಗಿದ್ದಾರೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿದ್ದೇನೆ ಎಂದರು.

ಸಾಮಾನ್ಯವಾಗಿ ಇದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಮೂವರು ಸಚಿವರ ಜವಾಬ್ದಾರಿಯಾಗಿದೆ ಎಂದರು. ಇತ್ತೀಚೆಗೆ ಪಕ್ಷದ ವರಿಷ್ಠ ನಾಯಕರ ಸಭೆಯಲ್ಲಿ ನಾವು ಭಾಗವಹಿಸಿದ್ದು, ಎಲ್ಲರ ಅಭಿಪ್ರಾಯವನ್ನೂ ಹೇಳಿದ್ದೇವೆ. ಯಾರನ್ನೇ ಅಭ್ಯರ್ಥಿ ಮಾಡಿದರೂ ಕಾಂಗ್ರೆಸ್ ಗೆಲ್ಲಿಸುವ ವಾಗ್ದಾನ ಮಾಡಿದ್ದೇವೆ. ಅಭ್ಯರ್ಥಿಯ ಆಯ್ಕೆಯ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಬಿಡಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆಂದು ತಿಳಿಸಿದರು.

ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತೇವೆ. ಆದ್ಯತೆ ಮೇರೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿರುವ 5 ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ಸಾಮಾನ್ಯವಾಗಿ 2 ಬಲಗೈ ಹಾಗೂ ಇನ್ನೆರೆಡು ಎಡಗೈ ಸಮುದಾಯಕ್ಕೆ ಹಂಚಿಕೆ ಮಾಡಿ, ಒಂದು ಸ್ಥಾನವನ್ನು ಬೋವಿ ಅಥವಾ ಲಂಬಾಣಿಗೆ ನೀಡುವುದು ಸಂಪ್ರದಾಯ.

ಈ ಬಾರಿ ಮೂರೂ ಕ್ಷೇತ್ರಗಳನ್ನು ಬಲಗೈ ಸಮುದಾಯಕ್ಕೆ ನೀಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.ಯಾರಿಗೇ ಟಿಕೆಟ್ ಕೊಟ್ಟರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

22 mins ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

1 hour ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

2 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

2 hours ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

3 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

4 hours ago