ಬೆಂಗಳೂರು: ನೋಂದಣಿಯಾಗದ ಆರ್ಎಸ್ಎಸ್ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ನವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ, ಹೊರ ದೇಶಗಳಿಂದ ದೇಣಿಗೆ ಬರುತ್ತಿದೆಯಾ ಎಂದು ಮಾಹಿತಿ ನೀಡಲಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂದು ಎಣಿಸಿ ಲೆಕ್ಕ ಇಡಲಾಗುತ್ತದೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಬಳಸಲಾಗುತ್ತದೆ. ಆದರೆ ಆರ್ಎಸ್ಎಸ್ಗೆ ಕೊಡುವ ದೇಣಿಗೆ ಬಗ್ಗೆ ಯಾವುದೇ ಲಕ್ಕವಿಲ್ಲ. ಹಾಗಾದರೆ ಆರ್ಎಸ್ಎಸ್ ದೇವಸ್ಥಾನ ಹಾಗೂ ದೇವರಿಗಿಂತ ದೊಡ್ಡದಾ ಎಂದು ಪ್ರಶ್ನೆ ಮಾಡಿದರು.
ಮುಂದುವರಿದು ಮಾತನಾಡಿದ ಅವರು, ಮೊದಲು ಆರ್ಎಸ್ಎಸ್ಗೆ ಬರುವ ದೇಣಿಗೆ ಮೂಲಗಳು ಯಾವುವು? ಯಾವ ಕಾರಣಕ್ಕೆ ದೇಣಿಗೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಡಲಿ ಎಂದು ಆಗ್ರಹಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…