ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಗಳಿಗೆ ಟಾಂಗ್ ನೀಡಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಯತೀಂದ್ರ, ಪ್ರತಾಪ್ ಸಿಂಹ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ ಕೌಂಟರ್ ಕೊಟ್ಟಿದ್ದಾರೆ. ಅವರ ಪಕ್ಷವೇ ಅವರನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ನಾವ್ಯಾಕೆ ಗಂಭೀರವಾಗಿ ತೆಗೆದುಕೊಳ್ಬೇಕು ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ : RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ
ಸಿಎಂ ಔತಣಕೂಟದಲ್ಲಿ ಬಿಹಾರ ಎಲೆಕ್ಷನ್ಗೆ ಯಾರ್ಯಾರು ಎಷ್ಟು ಹಣ ನೀಡಬೇಕು ಅಂತ ಚರ್ಚೆ ಮಾಡಿದ್ದಾರೆಂಬ ಆರ್.ಅಶೋಕ್ ಆರೋಪ ಕುರಿತು ಮಾತನಾಡಿ, ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ? ಸಿಎಂ ಆವಾಗ ಆವಾಗ ಔತಣಕೂಟ ಕರೆಯುತ್ತಿರುತ್ತಾರೆ ಎಂದು ತಿಳಿಸಿದರು.
ಈಗಿನ ರಾಜಕೀಯ ಸ್ಥಿತಿಗತಿ ಏನಿದೆ? ಅವರವರ ಇಲಾಖೆ ಹೇಗೆ ನಡೀತಿದೆ. ಸಮಸ್ಯೆ ಇದೆಯಾ ಅನ್ನೋದನ್ನ ಕೇಳಿ. ಬಿಹಾರ್ ಎಲೆಕ್ಷನ್ ಬಗ್ಗೆಯೂ ಚರ್ಚೆ ಮಾಡ್ತಾರೆ ಎಂದರು. ಎಲ್ಲಿವರೆಗೂ ಸಿದ್ದರಾಮಯ್ಯ ಅವರು ಸಿಎಂ ಆಗಿರ್ತಾರೋ, ಅಲ್ಲಿವರೆಗೂ ಅವರ ಸಂಪುಟದಲ್ಲಿ ನನ್ನ ಮಂತ್ರಿ ಮಾಡಲ್ಲ ಅಂತ ಹೇಳಿದ್ದಾರೆ. ಹಾಗಾಗಿ ನನ್ನ ಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆ ಬರಲ್ಲ ಅಂತ ಹೇಳಿದರು.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…