ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಗಳಿಗೆ ಟಾಂಗ್ ನೀಡಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಯತೀಂದ್ರ, ಪ್ರತಾಪ್ ಸಿಂಹ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ ಕೌಂಟರ್ ಕೊಟ್ಟಿದ್ದಾರೆ. ಅವರ ಪಕ್ಷವೇ ಅವರನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ನಾವ್ಯಾಕೆ ಗಂಭೀರವಾಗಿ ತೆಗೆದುಕೊಳ್ಬೇಕು ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ : RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ
ಸಿಎಂ ಔತಣಕೂಟದಲ್ಲಿ ಬಿಹಾರ ಎಲೆಕ್ಷನ್ಗೆ ಯಾರ್ಯಾರು ಎಷ್ಟು ಹಣ ನೀಡಬೇಕು ಅಂತ ಚರ್ಚೆ ಮಾಡಿದ್ದಾರೆಂಬ ಆರ್.ಅಶೋಕ್ ಆರೋಪ ಕುರಿತು ಮಾತನಾಡಿ, ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ? ಸಿಎಂ ಆವಾಗ ಆವಾಗ ಔತಣಕೂಟ ಕರೆಯುತ್ತಿರುತ್ತಾರೆ ಎಂದು ತಿಳಿಸಿದರು.
ಈಗಿನ ರಾಜಕೀಯ ಸ್ಥಿತಿಗತಿ ಏನಿದೆ? ಅವರವರ ಇಲಾಖೆ ಹೇಗೆ ನಡೀತಿದೆ. ಸಮಸ್ಯೆ ಇದೆಯಾ ಅನ್ನೋದನ್ನ ಕೇಳಿ. ಬಿಹಾರ್ ಎಲೆಕ್ಷನ್ ಬಗ್ಗೆಯೂ ಚರ್ಚೆ ಮಾಡ್ತಾರೆ ಎಂದರು. ಎಲ್ಲಿವರೆಗೂ ಸಿದ್ದರಾಮಯ್ಯ ಅವರು ಸಿಎಂ ಆಗಿರ್ತಾರೋ, ಅಲ್ಲಿವರೆಗೂ ಅವರ ಸಂಪುಟದಲ್ಲಿ ನನ್ನ ಮಂತ್ರಿ ಮಾಡಲ್ಲ ಅಂತ ಹೇಳಿದ್ದಾರೆ. ಹಾಗಾಗಿ ನನ್ನ ಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆ ಬರಲ್ಲ ಅಂತ ಹೇಳಿದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…