ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಗಳಿಗೆ ಟಾಂಗ್ ನೀಡಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಯತೀಂದ್ರ, ಪ್ರತಾಪ್ ಸಿಂಹ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ ಕೌಂಟರ್ ಕೊಟ್ಟಿದ್ದಾರೆ. ಅವರ ಪಕ್ಷವೇ ಅವರನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ನಾವ್ಯಾಕೆ ಗಂಭೀರವಾಗಿ ತೆಗೆದುಕೊಳ್ಬೇಕು ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ : RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ
ಸಿಎಂ ಔತಣಕೂಟದಲ್ಲಿ ಬಿಹಾರ ಎಲೆಕ್ಷನ್ಗೆ ಯಾರ್ಯಾರು ಎಷ್ಟು ಹಣ ನೀಡಬೇಕು ಅಂತ ಚರ್ಚೆ ಮಾಡಿದ್ದಾರೆಂಬ ಆರ್.ಅಶೋಕ್ ಆರೋಪ ಕುರಿತು ಮಾತನಾಡಿ, ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ? ಸಿಎಂ ಆವಾಗ ಆವಾಗ ಔತಣಕೂಟ ಕರೆಯುತ್ತಿರುತ್ತಾರೆ ಎಂದು ತಿಳಿಸಿದರು.
ಈಗಿನ ರಾಜಕೀಯ ಸ್ಥಿತಿಗತಿ ಏನಿದೆ? ಅವರವರ ಇಲಾಖೆ ಹೇಗೆ ನಡೀತಿದೆ. ಸಮಸ್ಯೆ ಇದೆಯಾ ಅನ್ನೋದನ್ನ ಕೇಳಿ. ಬಿಹಾರ್ ಎಲೆಕ್ಷನ್ ಬಗ್ಗೆಯೂ ಚರ್ಚೆ ಮಾಡ್ತಾರೆ ಎಂದರು. ಎಲ್ಲಿವರೆಗೂ ಸಿದ್ದರಾಮಯ್ಯ ಅವರು ಸಿಎಂ ಆಗಿರ್ತಾರೋ, ಅಲ್ಲಿವರೆಗೂ ಅವರ ಸಂಪುಟದಲ್ಲಿ ನನ್ನ ಮಂತ್ರಿ ಮಾಡಲ್ಲ ಅಂತ ಹೇಳಿದ್ದಾರೆ. ಹಾಗಾಗಿ ನನ್ನ ಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆ ಬರಲ್ಲ ಅಂತ ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…