ಪ್ರಜಾವಾಣಿ ವಾರದ ಸಂದರ್ಶನಕ್ಕೆ…ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ -ಪ್ರಜಾವಾಣಿ ಚಿತ್ರ/ಕೃಷ್ಣಕುಮಾರ್ ಪಿ.ಎಸ್.
ಬೀದರ್ : ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.
ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್.ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.
ಯಾರನ್ನು ಬಂಧಿಸಬಾರದು ಎಂಬುದು ತನಿಖಾಧಿಕಾರಿ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಏನಾದ್ರೂ ಆಗಿದೆ ಅಂದ್ರೆ, ಪರಿಶೀಲನೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಜಾರಿಕೊಂಡರು.
ಇನ್ನೂ ಕಿಯೋನಿಕ್ಸ್ ಎಮ್ಡಿಗೆ ಕಡ್ಡಾಯ ರಜೆ ವಿಚಾರವಾಗಿ ಮಾತನಾಡಿದ ಖಂಡ್ರೆ, ಆಡಳಿತಾತ್ಮಕ ವಿಷಯ ಜನರಿಗೆ ಹೇಗೆ ತಲುಪಿಸಬೇಕೋ ಸುಧಾರಣೆ ಮಾಡುತ್ತೇವೆ. ಸತ್ಯಾಂಶಗಳನ್ನ ತನಿಖೆ ಮಾಡಿ ಸುಧಾರಣೆ ಮಾಡುವ ಕೆಲಸ ಮಾಡುತ್ತೇವೆ. ಹಿಂದಿನ ಸರ್ಕಾರ ಮಾಡಿದ ಪಾಪದ ಕೆಲಸಗಳನ್ನು ತೊಳಿಯಲಿಕ್ಕೆ ಸಮಯ ಹಿಡಿಯುತ್ತದೆ ಎಂದು ಬಿಜೆಪಿ ನಾಯಕರಿಗೆ ಈಶ್ವರ ಖಂಡ್ರೆ ಟಾಂಗ್ ನೀಡಿದರು.
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…