ರಾಜ್ಯ

ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ? : ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

ಬೀದರ್ : ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್‍ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.

ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್‍.ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.

ಯಾರನ್ನು ಬಂಧಿಸಬಾರದು ಎಂಬುದು ತನಿಖಾಧಿಕಾರಿ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಏನಾದ್ರೂ ಆಗಿದೆ ಅಂದ್ರೆ, ಪರಿಶೀಲನೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಜಾರಿಕೊಂಡರು.

ಇನ್ನೂ ಕಿಯೋನಿಕ್ಸ್ ಎಮ್‍ಡಿಗೆ ಕಡ್ಡಾಯ ರಜೆ ವಿಚಾರವಾಗಿ ಮಾತನಾಡಿದ ಖಂಡ್ರೆ, ಆಡಳಿತಾತ್ಮಕ ವಿಷಯ ಜನರಿಗೆ ಹೇಗೆ ತಲುಪಿಸಬೇಕೋ ಸುಧಾರಣೆ ಮಾಡುತ್ತೇವೆ. ಸತ್ಯಾಂಶಗಳನ್ನ ತನಿಖೆ ಮಾಡಿ ಸುಧಾರಣೆ ಮಾಡುವ ಕೆಲಸ ಮಾಡುತ್ತೇವೆ. ಹಿಂದಿನ ಸರ್ಕಾರ ಮಾಡಿದ ಪಾಪದ ಕೆಲಸಗಳನ್ನು ತೊಳಿಯಲಿಕ್ಕೆ ಸಮಯ ಹಿಡಿಯುತ್ತದೆ ಎಂದು ಬಿಜೆಪಿ ನಾಯಕರಿಗೆ ಈಶ್ವರ ಖಂಡ್ರೆ ಟಾಂಗ್ ನೀಡಿದರು.

lokesh

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

54 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago