ರಾಜ್ಯ

ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ? : ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

ಬೀದರ್ : ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್‍ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.

ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್‍.ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.

ಯಾರನ್ನು ಬಂಧಿಸಬಾರದು ಎಂಬುದು ತನಿಖಾಧಿಕಾರಿ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಏನಾದ್ರೂ ಆಗಿದೆ ಅಂದ್ರೆ, ಪರಿಶೀಲನೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಜಾರಿಕೊಂಡರು.

ಇನ್ನೂ ಕಿಯೋನಿಕ್ಸ್ ಎಮ್‍ಡಿಗೆ ಕಡ್ಡಾಯ ರಜೆ ವಿಚಾರವಾಗಿ ಮಾತನಾಡಿದ ಖಂಡ್ರೆ, ಆಡಳಿತಾತ್ಮಕ ವಿಷಯ ಜನರಿಗೆ ಹೇಗೆ ತಲುಪಿಸಬೇಕೋ ಸುಧಾರಣೆ ಮಾಡುತ್ತೇವೆ. ಸತ್ಯಾಂಶಗಳನ್ನ ತನಿಖೆ ಮಾಡಿ ಸುಧಾರಣೆ ಮಾಡುವ ಕೆಲಸ ಮಾಡುತ್ತೇವೆ. ಹಿಂದಿನ ಸರ್ಕಾರ ಮಾಡಿದ ಪಾಪದ ಕೆಲಸಗಳನ್ನು ತೊಳಿಯಲಿಕ್ಕೆ ಸಮಯ ಹಿಡಿಯುತ್ತದೆ ಎಂದು ಬಿಜೆಪಿ ನಾಯಕರಿಗೆ ಈಶ್ವರ ಖಂಡ್ರೆ ಟಾಂಗ್ ನೀಡಿದರು.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

4 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

7 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago