ರಾಜ್ಯ

ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ? : ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

ಬೀದರ್ : ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್‍ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.

ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್‍.ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.

ಯಾರನ್ನು ಬಂಧಿಸಬಾರದು ಎಂಬುದು ತನಿಖಾಧಿಕಾರಿ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಏನಾದ್ರೂ ಆಗಿದೆ ಅಂದ್ರೆ, ಪರಿಶೀಲನೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಜಾರಿಕೊಂಡರು.

ಇನ್ನೂ ಕಿಯೋನಿಕ್ಸ್ ಎಮ್‍ಡಿಗೆ ಕಡ್ಡಾಯ ರಜೆ ವಿಚಾರವಾಗಿ ಮಾತನಾಡಿದ ಖಂಡ್ರೆ, ಆಡಳಿತಾತ್ಮಕ ವಿಷಯ ಜನರಿಗೆ ಹೇಗೆ ತಲುಪಿಸಬೇಕೋ ಸುಧಾರಣೆ ಮಾಡುತ್ತೇವೆ. ಸತ್ಯಾಂಶಗಳನ್ನ ತನಿಖೆ ಮಾಡಿ ಸುಧಾರಣೆ ಮಾಡುವ ಕೆಲಸ ಮಾಡುತ್ತೇವೆ. ಹಿಂದಿನ ಸರ್ಕಾರ ಮಾಡಿದ ಪಾಪದ ಕೆಲಸಗಳನ್ನು ತೊಳಿಯಲಿಕ್ಕೆ ಸಮಯ ಹಿಡಿಯುತ್ತದೆ ಎಂದು ಬಿಜೆಪಿ ನಾಯಕರಿಗೆ ಈಶ್ವರ ಖಂಡ್ರೆ ಟಾಂಗ್ ನೀಡಿದರು.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago