ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧದ ಎರಡನೇ ಹಂತದ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ವಕ್ಫ್ ಕಾನೂನು ರದ್ದಾಗುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದರು.
ಪಾಕಿಸ್ತಾನದ ಮೂರರಷ್ಟು ಆಸ್ತಿ ಈಗ ವಕ್ಫ್ ಆಸ್ತಿಯಾಗಿದೆ. ವಕ್ಫ್ಗಳ ಆಸ್ತಿ ಎಲ್ಲಾ ಹಿಂದೂಗಳ ಆಸ್ತಿ. ನಮ್ಮ ಹೋರಾಟದಿಂದಲೇ ದೇಶಾದ್ಯಾಂತ ವಕ್ಫ್ ಆಂದೋಲನ ಶುರುವಾಗಿದ್ದು, ವಕ್ಫ್ ಕಾನೂನು ರದ್ದು ಮಾಡಿಸುವ ಉದ್ದೇಶದಿಂದ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ಮೂರು ಹಂತದಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಸುತ್ತೇವೆ. ನಂತರ ಪ್ರಧಾನಿ ನರೇಂದ್ರ ಮೋದಿಗೆ ಈ ಕಾನೂನು ರದ್ದು ಮಾಡುವಂತೆ ಮನವಿ ಮಾಡುತ್ತೇವೆ. ದೇಶದಲ್ಲಿ ವಕ್ಫ್ ಕಾನೂನು ರದ್ದಾಗಬೇಕು ಇದು ನಮ್ಮ ಸ್ಪಷ್ಟ ಗುರಿ ಎಂದು ಹೇಳಿದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…