ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧದ ಎರಡನೇ ಹಂತದ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ವಕ್ಫ್ ಕಾನೂನು ರದ್ದಾಗುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದರು.
ಪಾಕಿಸ್ತಾನದ ಮೂರರಷ್ಟು ಆಸ್ತಿ ಈಗ ವಕ್ಫ್ ಆಸ್ತಿಯಾಗಿದೆ. ವಕ್ಫ್ಗಳ ಆಸ್ತಿ ಎಲ್ಲಾ ಹಿಂದೂಗಳ ಆಸ್ತಿ. ನಮ್ಮ ಹೋರಾಟದಿಂದಲೇ ದೇಶಾದ್ಯಾಂತ ವಕ್ಫ್ ಆಂದೋಲನ ಶುರುವಾಗಿದ್ದು, ವಕ್ಫ್ ಕಾನೂನು ರದ್ದು ಮಾಡಿಸುವ ಉದ್ದೇಶದಿಂದ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ಮೂರು ಹಂತದಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಸುತ್ತೇವೆ. ನಂತರ ಪ್ರಧಾನಿ ನರೇಂದ್ರ ಮೋದಿಗೆ ಈ ಕಾನೂನು ರದ್ದು ಮಾಡುವಂತೆ ಮನವಿ ಮಾಡುತ್ತೇವೆ. ದೇಶದಲ್ಲಿ ವಕ್ಫ್ ಕಾನೂನು ರದ್ದಾಗಬೇಕು ಇದು ನಮ್ಮ ಸ್ಪಷ್ಟ ಗುರಿ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…