ರಾಜ್ಯ

ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ? : ಕೇಂದ್ರ ಸಚಿವೆ ಶೋಭಾ

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್‌ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಅಂತೆಯೇ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಸಹ ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಯಾರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲವೋ, ಯಾರಿಗೆ ಮೂರ್ತಿ ಪೂಜೆ ಮೇಲೆ ನಂಬಿಕೆ ಇಲ್ಲವೋ ಅವರು ದಸರಾ ಉದ್ಘಾಟನೆಗೆ ಬಂದು ಏನು ಮಾಡುತ್ತಾರೆ. ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ. ಲೇಖಕಿ ಬಾನು ಮುಷ್ತಾಕ್ ಅವರು ದೇವರಿಗೆ ಪುಷ್ಪಾರ್ಚನೆ ಮಾಡಲ್ಲ ಅಂತ ಭಾವಿಸುತ್ತೇನೆ. ಜಾತ್ಯತೀತೆಯ ಅರ್ಥ ಹಿಂದು ಧರ್ಮಕ್ಕೆ ವಿರೋಧ ಮಾಡು ಎಂಬುವುದಲ್ಲ. ಅವರಿಗೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ ಹೇಳಲಿ. ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಪುಷ್ಪಾರ್ಚನೆಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago