ರಾಜ್ಯ

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು ಯಾಕೆ ಇನ್ನೂ ಸ್ಟೋರೇಜ್ ನಲ್ಲಿ ಇಟ್ಟುಕೊಂಡಿದ್ದೀರಿ? ಅಹಿಂದ ನಾಯಕ ಎನ್ನುವ ನೀವು ವರದಿ ಬಿಡುಗಡೆ ಮಾಡಿ ಅವಕಾಶ ವಂಚಿತ ಸಮುದಾಯಗಳಿಗೆ ಅನುಕೂಲ ಯಾಕೆ ಮಾಡಿಕೊಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಮೀಕ್ಷೆ ನಡೆಸಲು ನೇಮಿಸಲಾಗಿದ್ದ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸದೆ ಅದನ್ನು ಕುಮಾರಸ್ವಾಮಿ ತಡೆದು ಹಿಡಿದುಬಿಟ್ಟರು ಎಂದು ನನ್ನನ್ನು ಪದೇ ಪದೇ ದೂರುತ್ತಿದ್ದೀರಾ. ನಾನು ಮುಖ್ಯಮಂತ್ರಿಗಳನ್ನು ಕೇಳುವುದು ಇಷ್ಟೇ, ಇದೀಗ ಅವೆಲ್ಲ ನಿಮ್ಮ ಬಳಿಯೇ ಇದೇ, ಅದನ್ನು ಎಷ್ಟು ದಿನವೆಂದು ನಿಮ್ಮ ಬಳಿ ಇಟ್ಟುಕೊಳ್ಳುತ್ತೀರಿ? ಯಾಕೆ ವರದಿಗಳನ್ನು ಇನ್ನು ಬಿಡುಗಡೆ ಮಾಡಿಲ್ಲ? ಎಂದು ಪ್ರಶ್ನಿಸಿದರು.

ರಾಜ್ಯವು ಸಮೃದ್ಧವಾಗಿದೆ, ಇಡೀ ದೇಶದಲ್ಲಿ ತಲಾದಾಯ ಮಾನದಂಡದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ನೀವು ಹೇಳುತ್ತಿದ್ದೀರಿ. ಸರ್ಕಾರದ ಲೆಕ್ಕಗಳು ಪ್ರಕಾರ ರಾಜ್ಯದ ಜನರಿಗೆ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ತಲಾದಾಯ ಚೆನ್ನಾಗಿದ್ದರೆ ಈ ಅಲ್ಪ ಪರಿಹಾರದ ಗ್ಯಾರಂಟಿಗಳನ್ನು ಕೊಡುವ ಅಗತ್ಯ ಏಕೆ? ಜನ ನೆಮ್ಮದಿಯಾಗಿ ಇದ್ದರೆ ಉಚಿತ ಕೊಡುಗೆಗಳ ಅಗತ್ಯ ಏತಕ್ಕೆ? ಯಾಕೆ ಇಂತಹ ಆತ್ಮವಂಚಕ ಹೇಳಿಕೆಗಳನ್ನು ಕೊಡುತ್ತೀರಿ? ಎಷ್ಟು ವರ್ಷ ಇಂತಹ ಉಚಿತ ಕೊಡುಗೆಗಳನ್ನು ಕೊಡಲು ಸಾಧ್ಯ? ಬೇರೆ ರಾಜ್ಯಗಳಲ್ಲಿ ಕೊಟ್ಟಿದ್ದಾರೆ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಕೊಟ್ಟರೆ ನೀವು ಕೊಡಬೇಕು ಅಂತ ಏನಾದರೂ ಇದೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಕಳೆದ ಮೂರು ವರ್ಷಗಳಲ್ಲಿ ಈ ಸರ್ಕಾರ ಏನಾದರೂ ಸಾಧನೆ ಮಾಡಿದೆಯಾ ಎಂದು ಮಾಧ್ಯಮಗಳಲ್ಲಿ ದುರ್ಬೀನು ಹಾಕಿ ಹುಡುಕಿದರು ಏನೇನು ಸಿಗುವುದಿಲ್ಲ. ಗ್ಯಾರೆಂಟಿಗಳನ್ನು ಬಿಟ್ಟು ಉಳಿದಂತೆ ಏನು ಸಾಧನೆ ಮಾಡಿರುವುದು ತಿಳಿಯುವುದಿಲ್ಲ. ದೃಶ್ಯ ಮಾಧ್ಯಮಗಳನ್ನು ನೋಡಿದರೆ, ಪತ್ರಿಕೆಗಳನ್ನು ಓದಿದರೆ ಮುಖ್ಯಮಂತ್ರಿಗಳು ಕುರ್ಚಿಗೆ ಪ್ರಾಮುಖ್ಯತೆ ಕೊಟ್ಟಿರುವ ವರದಿಗಳಷ್ಟೇ ಕಣ್ಣಿಗೆ ಕಾಣುತ್ತದೆ. ಅದು ಬಿಟ್ಟರೆ ಭ್ರಷ್ಟಾಚಾರದ ಹಗರಣಗಳು ಹೆಜ್ಜೆ ಹೆಜ್ಜೆಗೂ ಗೋಚರವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

7 mins ago

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

45 mins ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

50 mins ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

4 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

4 hours ago