ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ.
ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ ನ್ಯಾಯಾಂಗ ಬಂಧನದಲ್ಲಿರು ಮೈಸೂರಿನ ಸಮೀರ್ ಖಾನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಕೀಲ ಆರ್. ಮಹದೇವ ಅರ್ಜಿದಾರರನ್ನು ಮೈಸೂರಿನ ಬಿಇಒ ಕಚೇರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ದಾಖಲಾಗಿರುವ ಕಲಂಗಳು ಜಾಮೀನು ಪಡೆಯಲು ಅರ್ಹವಾಗಿವೆ. ಆದರೆ ವಿಚಾರಣಾ ಕೋರ್ಟ್ ಜಾಮೀನು ತಿರಸ್ಕರಿಸಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಈ ಮಾತಿಗೆ ನ್ಯಾಯಮೂರ್ತಿಗಳು, ಏನ್ರೀ ಇದು ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನೆಲ್ಲಾ ಸೆಟಲ್ ಮಾಡಲಾಗುತ್ತದೆಯೇ? ಹೀಗಾದರೆ ನಾಳೆ ಎಂಡಿಎಂಎ ಕೇಸುಗಳನ್ನೂ ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಬಹುದಲ್ಲವೇ ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಮೈಸೂರಿನಲ್ಲೇ ಗಾಂಜಾ ಕೇಸುಗಳು ಯಾಕೆ ಜಾಸ್ತಿ ಎಂದು ಅರ್ಜಿದಾರರ ಪರ ವಕೀಲರನ್ನು ಕೌತುಕದಿಂದ ಪ್ರಶ್ನಿಸಿದ ನ್ಯಾಯಮೂರ್ತಿಗಳು, ಮುಂದೆ ಏನಾದರೂ ಈ ಆರೋಪಿಯ ಕೈಯಿಂದ ವಾಣಿಜ್ಯ ಉದ್ದೇಶದ ಹೊರತಾದ ಮೂರು ಗ್ರಾಂ ಗಾಂಜಾ ಸಿಕ್ಕರೂ ಬಿಡುವುದಿಲ್ಲ. ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಸಿ ಮಧ್ಯಂತರ ಮನವಿಯ ಅನುಸಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…