ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ.
ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ ನ್ಯಾಯಾಂಗ ಬಂಧನದಲ್ಲಿರು ಮೈಸೂರಿನ ಸಮೀರ್ ಖಾನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಕೀಲ ಆರ್. ಮಹದೇವ ಅರ್ಜಿದಾರರನ್ನು ಮೈಸೂರಿನ ಬಿಇಒ ಕಚೇರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ದಾಖಲಾಗಿರುವ ಕಲಂಗಳು ಜಾಮೀನು ಪಡೆಯಲು ಅರ್ಹವಾಗಿವೆ. ಆದರೆ ವಿಚಾರಣಾ ಕೋರ್ಟ್ ಜಾಮೀನು ತಿರಸ್ಕರಿಸಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಈ ಮಾತಿಗೆ ನ್ಯಾಯಮೂರ್ತಿಗಳು, ಏನ್ರೀ ಇದು ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನೆಲ್ಲಾ ಸೆಟಲ್ ಮಾಡಲಾಗುತ್ತದೆಯೇ? ಹೀಗಾದರೆ ನಾಳೆ ಎಂಡಿಎಂಎ ಕೇಸುಗಳನ್ನೂ ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಬಹುದಲ್ಲವೇ ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಮೈಸೂರಿನಲ್ಲೇ ಗಾಂಜಾ ಕೇಸುಗಳು ಯಾಕೆ ಜಾಸ್ತಿ ಎಂದು ಅರ್ಜಿದಾರರ ಪರ ವಕೀಲರನ್ನು ಕೌತುಕದಿಂದ ಪ್ರಶ್ನಿಸಿದ ನ್ಯಾಯಮೂರ್ತಿಗಳು, ಮುಂದೆ ಏನಾದರೂ ಈ ಆರೋಪಿಯ ಕೈಯಿಂದ ವಾಣಿಜ್ಯ ಉದ್ದೇಶದ ಹೊರತಾದ ಮೂರು ಗ್ರಾಂ ಗಾಂಜಾ ಸಿಕ್ಕರೂ ಬಿಡುವುದಿಲ್ಲ. ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಸಿ ಮಧ್ಯಂತರ ಮನವಿಯ ಅನುಸಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…