ಬೆಂಗಳೂರು : “ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದಾರೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.
“ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದರು.
ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ (ಮಾಧ್ಯಮದವರು) ಮಿಕ್ಕಿದವರ ಮಾತಿಗೆಲ್ಲಾ ಕಿವಿಗೊಡಬಾರದು” ಎಂದು ಹೇಳಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…