ಬೆಂಗಳೂರು : “ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದಾರೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.
“ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದರು.
ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ (ಮಾಧ್ಯಮದವರು) ಮಿಕ್ಕಿದವರ ಮಾತಿಗೆಲ್ಲಾ ಕಿವಿಗೊಡಬಾರದು” ಎಂದು ಹೇಳಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…