ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಮೂವರನ್ನು ಗುರುವಾರ(ಜೂ.20) ಮತ್ತೊಮ್ಮೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ನಡುವೆ ನಟ ಚೇತನ್ ಅಹಿಂಸಾ ಅವರು ದರ್ಶನ್ ಪ್ರಕರದಲ್ಲಿ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಮೌನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ನಟ ಚೇತನ್ ಅಹಿಂಸಾ, ಸುಮಲತಾ ತಮ್ಮ ಹಿರಿಯ ಮಗ ದರ್ಶನ್ ಬಗ್ಗೆ ಯಾಕೆ ಮಾತಾಡ್ತಿಲ್ಲ? ದರ್ಶನ್ ಸ್ಟಾರ್ನ್ನು ರಾಜಕೀಯಕ್ಕಾಗಿ ಬಳಸಿಕೊಂಡ ಸುಮಲತಾ ಈಗ ಸುಮ್ಮನಿರೋದೇಕೆ ಎಂದು ಪ್ರಶ್ನಿಸಿದ್ದಾರೆ.
ಬಹುತೇಕ ಕೆ.ಎಫ್.ಐ ವ್ಯಕ್ತಿಗಳು ದರ್ಶನ್ ಪ್ರಕರಣ ಒಂದು ವಾರಕ್ಕೂ ಮೀರಿದ್ದರೂ ಅದರ ಬಗ್ಗೆ ಮೌನವಾಗಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಲಾಭಕ್ಕಾಗಿ ದರ್ಶನ್ ಅವರ ಸ್ಟಾರ್ ಪವರ್ನ್ನು ಬಳಸಿಕೊಂಡ ಸುಮಲರಾ ಅಂಬರೀಶ್ ದರ್ಶನ್ರನ್ನು ತಮ್ಮ ಹಿರಿಯ ಮಗ ಎಂದು ಕರೆದಿದ್ದರು. ತಮ್ಮ ಮಗನ ಇತ್ತೀಚಿನ ಘಟನೆಗಳ ಬಗ್ಗೆ ಸುಮಲತಾ ಏನು ಹೇಳುತ್ತಾರೆ? ತಲೆ ಮರೆಸಿಕೊಳ್ಳುವುದು ಒಂದು ಆಯ್ಕೆಯಾಗಿರಬಾರದು ಎಂದು ತಮ್ಮ ಖಾತೆಯಲ್ಲಿ ಚೇತನ್ ಬರೆದುಕೊಂಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…